ಉಗ್ರ ತರಬೇತಿ ಕೇಂದ್ರ (ಸಂಗ್ರಹ ಚಿತ್ರ) 
ದೇಶ

ಎನ್ ಐಎ ಭೇಟಿ: ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣದ ಸಾಕ್ಷ್ಯ ನಾಶಕ್ಕೆ ಪಾಕಿಸ್ತಾನ ಯತ್ನ?

ಪಠಾಣ್​ಕೋಟ್ ವಾಯುನೆಲೆ ಮೇಲೆ ದಾಳಿ ನಡೆದಿದ್ದ ಉಗ್ರ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಪಾಕಿಸ್ತಾನಕ್ಕೆ ಭೇಟಿ ನೀಡಲು ಮುಂದಾಗಿರುವ ಬೆನ್ನಲ್ಲೇ ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್ ಐ ಸಾಕ್ಷ್ಯ ನಾಶಕ್ಕೆ ಮುಂದಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಪಠಾಣ್​ಕೋಟ್ ವಾಯುನೆಲೆ ಮೇಲೆ ದಾಳಿ ನಡೆದಿದ್ದ ಉಗ್ರ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಪಾಕಿಸ್ತಾನಕ್ಕೆ ಭೇಟಿ ನೀಡಲು ಮುಂದಾಗಿರುವ ಬೆನ್ನಲ್ಲೇ  ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್ ಐ ಸಾಕ್ಷ್ಯ ನಾಶಕ್ಕೆ ಮುಂದಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರಿಗೆ ತರಬೇತಿ ನೀಡಲಾಗುತ್ತಿದ್ದ ರಹಸ್ಯ ಸ್ಥಳವನ್ನು ಪಾಕಿಸ್ತಾನ ಗೂಡಚಾರ ಸಂಸ್ಥೆ  ಐಎಎಸ್ ಐ ದಿಢೀರ್ ಬದಲಿಸಿರುವುದು ಇಂತಹ ಶಂಕೆಗೆ ಕಾರಣವಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಗುಪ್ತಚರ ಇಲಾಖೆಯ ಮೂಲಗಳ ಪ್ರಕಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಬಹಾವಲ್​ಪುರದ ಸಮೀಪದ ಕೋಟೆಯಲ್ಲಿದ್ದ ಉಗ್ರ ತರಬೇತಿ ಕ್ಯಾಂಪ್ ಅನ್ನು ಸ್ಥಳಾಂತರಿಸಲಾಗಿದೆ  ಎಂದು ತಿಳಿದುಬಂದಿದೆ. ಈ ಕೋಟೆಯನ್ನು 18ನೇ ಶತಮಾನದಲ್ಲಿ ಮೊಹಮ್ಮದ್ ಮಾರೂಫ್ ಖಾನ್ ಕೆಹ್ರಾನಿ ನಿರ್ಮಿಸಿದ್ದ ಮೌಜಾಗಢ್ ಕೋಟೆಯಲ್ಲಿ ಈ ವರೆಗೂ ಉಗ್ರರಿಗೆ ತರಬೇತಿ  ನೀಡಲಾಗಿತ್ತು. ಆದರೆ ಐಎಸ್ ಐ ಇದೀಗ ತುರ್ತಾಗಿ ತರಬೇತಿ ಕ್ಯಾಂಪ್ ಅನ್ನು ಸ್ಥಳಾಂತರ ಮಾಡಿದೆ. ಐಎಸ್​ಐ ಆದೇಶದಂತೆ ಸ್ಥಳವನ್ನು ತೆರವುಗೊಳಿಸಲಾಗಿದೆ ಎಂದು ಗುಪ್ತಚರ ಮೂಲಗಳು  ತಿಳಿಸಿವೆ.

ಕೋಟೆಯ ಗೋಡೆಗಳಿಗೆ ಹೊಂದಿಕೊಂಡಂತೆ ಎರಡು ಕಟ್ಟಡಗಳನ್ನು ಕಟ್ಟಲಾಗಿದ್ದು, ಪ್ರತಿಯೊಂದು ಭಾಗವೂ 750 ಚದರ ಮೀಟರ್ ವಿಸ್ತೀರ್ಣ ಹೊಂದಿವೆ. ಇಲ್ಲಿ ಉಗ್ರರು ಉಳಿದುಕೊಂಡು  ತರಬೇತಿ ಪಡೆಯಲು ಸಕಲ ವ್ಯವಸ್ಥೆ ರೂಪಿಸಲಾಗಿತ್ತು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಇನ್ನು ಭಾರತಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನದ ತನಿಖಾಧಿಕಾರಿಗಳಿಗೆ ಸಾಕಷ್ಟು ಸಾಕ್ಷ್ಯಗಳನ್ನು  ನೀಡಿದ್ದರೂ ಪಾಕಿಸ್ತಾನ ಮಾತ್ರ ಈ ವೆರೆಗೂ ಉಗ್ರ ಮುಖಂಡ ಮಸೂದ್ ವಿರುದ್ಧ ಯಾವುದ ಕ್ರಮ ಕೈಗೊಂಡಿಲ್ಲ. ಬದಲಿಗೆ ಪಠಾಣ್ ಕೋಟ್ ದಾಳಿಯಲ್ಲಿ ಭಾಗಿಯಾಗಿದ್ದ ಜೈಷ್ ಇ ಮೊಹಮದ್  ಉಗ್ರ ಸಂಘಟನೆಯ ತರಬೇತಿ ಕ್ಯಾಂಪ್ ಅನ್ನು ಸ್ಥಳಾಂತರ ಮಾಡುವ ಮೂಲಕ ಉಗ್ರರ ರಕ್ಷಣೆಗೆ ಮುಂದಾಗಿದೆ. ಅಂತೆಯೇ ಪ್ರಕರಣ ಸಂಬಂಧ ಸಾಕ್ಷ್ಯನಾಶಕ್ಕೂ ಪಾಕಿಸ್ತಾನ ಯತ್ನಿಸುತ್ತಿದೆ  ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT