ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ 
ದೇಶ

ಉತ್ತರಾಖಂಡ್: ಬಹುಮತ ಪರೀಕ್ಷೆ ಪರಿಗಣಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಮಾರ್ಚ್ ೨೭ ರಿಂದ ಉತ್ತರಾಖಾಂಡ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವ ಪ್ರಕರಣದ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್, ಹೊರಹಾಕಲಾಗಿರುವ ಮುಖ್ಯಮಂತ್ರಿ ಹರೀಶ್ ರಾವತ್

ನವದೆಹಲಿ: ಮಾರ್ಚ್ ೨೭ ರಿಂದ ಉತ್ತರಾಖಾಂಡ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವ ಪ್ರಕರಣದ ವಿಚಾರಣೆ ಮುಂದುವರೆಸಿದ ಸುಪ್ರೀಂ ಕೋರ್ಟ್, ಹೊರಹಾಕಲಾಗಿರುವ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಹುಮತ ಸಾಬೀತು ಪಡಿಸಲು ಅವಕಾಶ ನೀಡುವ ಸಾಧ್ಯತೆಯನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಕೋರ್ಟ್ ಸೂಚಿಸಿದೆ.

ನ್ಯಾಯಾಧೀಶ ದೀಪಕ್ ಮಿಶ್ರಾ ಮುಖಂಡತ್ವದ ಅಪೆಕ್ಸ್ ನ್ಯಾಯಾಲಯ ಪೀಠ, ಇದರ ಬಗ್ಗೆ ಸರ್ಕಾರದಿಂದ ಸೂಚನೆ ಪಡೆದು ಕೋರ್ಟ್ ಗೆ ತಿಳಿಸುವಂತೆ ಅಟಾರ್ನಿ ಜನರಲ್ ಮುಕುಲ್ ರೋಹತ್ಗಿ ಅವರಿಗೆ ಸೂಚಿಸಿದೆ.

ಪರ್ವತ ರಾಜ್ಯದಲ್ಲಿ ಎದ್ದಿರುವ ರಾಜಕೀಯ ಅನಿಶ್ಚಿತತೆಯನ್ನು ಬಗೆಹರಿಸುವಂತೆ ಈ ಹಿಂದೆ ಕೂಡ ಕೋರ್ಟ್ ಹೇಳಿತ್ತು ಎಂದು ಅಭಿಪ್ರಾಯ ಪಟ್ಟಿದೆ.

ಮಂಗಳವಾರ ಮಧ್ಯಾಹ್ನ ೨ ಘಂಟೆಗೆ ವಿಚಾರಣೆ ಮತ್ತೆ ಆರಂಭವಾಗಬೇಕಿತ್ತು ಆದರೆ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಈ ಪ್ರಕರಣವನ್ನು ನ್ಯಾಯಾಧೀಶ ಶಿವ ಕೀರ್ತಿ ಸಿಂಗ್ ಮತ್ತು ಮಿಶ್ರಾ ಅವರನ್ನು ಒಳಗೊಂಡ ಪೀಠ ವಿಚಾರಣೆ ಮಾಡಬೇಕಿತ್ತು ಆದರೆ ಸಿಂಗ್ ಅವರು ಮಧ್ಯಾಹ್ನ ೨ ಘಂಟೆಗೆ ಮತ್ತೊಂದು ಪ್ರಕರಣದ ವಿಚಾರಣೆ ಮಾಡಬೇಕಿರುವ ಪೀಠದ ಸದಸ್ಯರಾಗಿರುವುದರಿಂದ ಉತ್ತರಾಖಂಡ್ ವಿಚಾರಣೆಯನ್ನು ಮುಂದೂಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT