ರಾಬರ್ಟ್ ವಾದ್ರಾ, ರಾಹುಲ್ ಗಾಂಧಿ 
ದೇಶ

ಕಿಕ್ ಬ್ಯಾಕ್ ಗಾಗಿ ರಾಹುಲ್, ವಾದ್ರಾರಿಂದ ಹೊಸ ಯೋಜನೆ: ಸೋಮಯ್ಯ

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ...

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ಭಾವ ರಾಬರ್ಟ್ ವಾದ್ರಾ ಅವರು, ಕಿಕ್ ಬ್ಯಾಕ್ ಪಡೆಯುವುದಕ್ಕಾಗಿಯೇ ಡಿಎಲ್ಎಫ್ ಎಂಬ ಹೊಸ ಯೋಜನೆ ಆರಂಭಿಸಿದ್ದಾರೆ ಎಂದು ಬಿಜೆಪಿ ಸಂಸದ ಕಿರಿಟ್ ಸೋಮಯ್ಯ ಅವರು ಬುಧವಾರ ಆರೋಪಿಸಿದ್ದಾರೆ.
ಅಂಗಡಿಗಳನ್ನು ಖರೀದಿಸುವುದರ ಹಿಂದಿನ ನಿಮ್ಮ ಉದ್ದೇಶವಾದರೂ ಏನು? ರಾಜಕೀಯ ಬಿಟ್ಟು ತರಕಾರಿ ಅಂಗಡಿ ತೆರೆಯಲು ನಿರ್ಧರಿಸಿದ್ದೀರಾ? ಎಂದು ರಾಹುಲ್ ಗಾಂಧಿಯನ್ನು ಬಿಜೆಪಿ ಸಂಸದ ಪ್ರಶ್ನಿಸಿದ್ದಾರೆ.
'ಅಂಗಡಿಗಳನ್ನು ಖರೀದಿಸಿರುವುದಾಗಿ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಆದರೆ ಅವರು ಯಾವ ಬೆಲೆಗೆ ಆ ಅಂಗಡಿಗಳನ್ನು ಖರೀದಿಸಿದ್ದಾರೆ ಮತ್ತು ಮತ್ತೆ ಅವುಗಳನ್ನು ಎಂಜಿಎಫ್ ಗೆ ಯಾವ ಬೆಲೆಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿ' ಎಂದಿದ್ದಾರೆ.
ರಾಹುಲ್ ಗಾಂಧಿ ಅವರು ದೆಹಲಿಯಲ್ಲಿರುವ ಎಂಜಿಎಫ್ ಮಾಲೀಕತ್ವದ ಮಾಲ್ ವೊಂದರಲ್ಲಿ ಅಂಗಡಿಗಳನ್ನು ಖರೀದಿಸಿರುವುದಾಗಿ ಹೇಳಿದ್ದಾರೆ. ಅಲ್ಲದೆ ಇದನ್ನು ಅವರು ತಮ್ಮ ಅಫಿಡವಿಟ್ ನಲ್ಲೂ ತಿಳಿಸಿದ್ದಾರೆ ಎಂದು ಸೋಮಯ್ಯ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT