ಶಾಸಕ ಮನ್ಸೆರಾಟ್ (ಚಿತ್ರ ಕೃಪೆ ಎಎನ್ಐ) 
ದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಗೋವಾ ಶಾಸಕ ಪೊಲೀಸರಿಗೆ ಶರಣು

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಗೋವಾ ಉಚ್ಚಾಟಿತ ಕಾಂಗ್ರೆಸ್ ಶಾಸಕ ಅಟಾನ್ಸಿಯೋ ಮಾನ್ಸೆರಾಟ್ ಅಲಿಯಾಸ್ ಬಾಬುಷ್...

ಪಣಜಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಗೋವಾ ಉಚ್ಚಾಟಿತ ಕಾಂಗ್ರೆಸ್ ಶಾಸಕ ಅಟಾನ್ಸಿಯೋ ಮಾನ್ಸೆರಾಟ್ ಅಲಿಯಾಸ್ ಬಾಬುಷ್ ಮಾನ್ಸೆರಾಟ್ ಗುರುವಾರ ಪೊಲೀಸರಿಗೆ ಶರಣಾಗಿದ್ದಾರೆ.
ಗೋವಾ ಪೊಲೀಸರು ಮಾಜಿ ಶಿಕ್ಷಣ ಸಚಿವ ಬಾಬುಷ್ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಾಗೂ ಮಾನವ ಕಳ್ಳ ಸಾಗಣೆಯ ಆರೋಪದ ಮೇಲೆ ಬುಧವಾರ ಎಫ್ ಐಆರ್ ದಾಖಲಿಸಿದ್ದರು. ಇಂದು ಆರೋಪಿಯವನ್ನು ವಶಕ್ಕೆ ಪಡೆದಿರುವ ಗೋವಾ ಅಪರಾಧ ವಿಭಾಗದ ಪೊಲೀಸರು, ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
'ತನ್ನನ್ನು ತನ್ನ ಮಲತಾಯಿ ಮತ್ತು ಇನ್ನೋರ್ವ ಮಹಿಳೆ ಮಾನ್ಸೆರಾಟ್‌ಗೆ ಮಾರಿದ್ದಾರೆ ಎಂದು 16 ವರ್ಷದ ಸಂತ್ರಸ್ತ ಬಾಲಕಿ ದೂರಿದ್ದಾಳೆ. ಅಲ್ಲದೆ ಮಾನ್ಸೆರಾಟ್‌ ತನ್ನ ಬಂಗ್ಲೆಯಲ್ಲಿ ನನಗೆ ಪಾನೀಯಕ್ಕೆ ಅಮಲು ಬೆರೆಸಿ ಕುಡಿಯಲು ಕೊಟ್ಟು ಬಳಿಕ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮರುದಿನ ಬೆಳಗ್ಗೆ ನಾನು ಕಣ್ತೆರೆದಾಗ ನನ್ನ ಮೈಮೇಲೆ ಬಟ್ಟೆಗಳಿರಲಿಲ್ಲ; ರಕ್ತ ತಗುಲಿಕೊಂಡಿತ್ತು. ಆತ ಬಟ್ಟೆ ಧರಿಸಿಕೊಳ್ಳದೆ ನನ್ನ ಬಳಿ ಕುಳಿತಿದ್ದ ಎಂದು ಆರೋಪಿಸಿದ್ದಾಳೆ,
ಆದರೆ ಬಾಲಕಿಯ ಆರೋಪವನ್ನು ತಳ್ಳಿಹಾಕಿರುವ ಶಾಸಕ, ನನ್ನ ವಿರುದ್ಧ ಪಿತೂರಿ ನಡೆಸಲಾಗುತ್ತಿದ್ದು, ಸುಳ್ಳು ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗುತ್ತಿದೆ. ಬಾಲಕಿ ನನ್ನ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದಳು, ಹಣ ಕಳ್ಳತನದ ಆರೋಪದ ಮೇಲೆ ಆಕೆಯನ್ನು ಕೆಲಸದಿಂದ ತೆಗೆದು ಹಾಕಿದ್ದೆ. ಈಗ ಆಕೆ ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾಳೆ ಎಂದಿದ್ದಾರೆ.
ಬಾಬುಷ್ ವಿರುದ್ಧ ಐಪಿಸಿ ಸೆಕ್ಷನ್ 375ರ ಪ್ರಕಾರ ಎಫ್​ಐಆರ್ ದಾಖಲಾಗಿದೆ. ಬಾಬುಷ್ ಸೇಟ್ ಕ್ರೂಜ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು, ನಂತರ ಬಿಜೆಪಿಯೊಂದಿಗೆ ಗುರುತಿಸಿಕೊಂಡ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT