ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ತನಿಖೆ ದುರ್ಬಲಗೊಳಿಸಲು ಯತ್ನಿಸಿತ್ತಾ ಜಾರಿ ನಿರ್ದೇಶನಾಲಯ? 
ದೇಶ

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ತನಿಖೆ ದುರ್ಬಲಗೊಳಿಸಲು ಯತ್ನಿಸಿತ್ತಾ ಜಾರಿ ನಿರ್ದೇಶನಾಲಯ?

ಇತ್ತೀಚಿನ ವರದಿ ಪ್ರಕಾರ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯವೇ ದುರ್ಬಲಗೊಳಿಸಿತ್ತು ಎಂಬ ಆರೋಪ ಕೇಳಿಬಂದೆ.

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದೊಂದು ಬೆಳವಣಿಗೆಗಳಾಗುತ್ತಿದ್ದು, ಇತ್ತೀಚಿನ ವರದಿ ಪ್ರಕಾರ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯವೇ ದುರ್ಬಲಗೊಳಿಸಿತ್ತು ಎಂಬ ಆರೋಪ ಕೇಳಿಬಂದೆ.     
ಹಣದುರುಪಯೋಗ ತಡೆ ಕಾಯ್ದೆ 2002 ರ ಅಡಿಯಲ್ಲಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣವನ್ನು ತನಿಖೆ ನಡೆಸಲು ಇಡಿ(ಜಾರಿ ನಿರ್ದೇಶನಾಲಯ) ಆಸಕ್ತಿ ತೋರಿರಲಿಲ್ಲ, 2013 ರ ಡಿಸೆಂಬರ್ ನಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿದ ನಂತರವೂ 7 ತಿಂಗಳ ವರೆಗೆ ತನಿಖೆಯನ್ನು ನಡೆಸಲಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇಷ್ಟೇ ಅಲ್ಲದೇ ಜಾರಿ ನಿರ್ದೇಶನಾಲಯದ ಈ ಹಿಂದಿನ ಮುಖ್ಯಸ್ಥರು ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣವನ್ನು ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆಯಡಿಯಲ್ಲಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿ ತನಿಖೆಯನ್ನು ದುರ್ಬಲಗೊಳಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ನಾಗರಿಕ ಅಪರಾಧಗಳ ವ್ಯಾಪ್ತಿಗೆ ಬರುತ್ತದೆ, ಕಳೆದ ವರ್ಷದ ವರೆಗೂ  ಈ ಕಾಯ್ದೆಯಡಿಯಲ್ಲಿ ಅಪರಾಧ ಸಾಬೀತಾದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಈಗ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು ಜಾರಿ ನಿರ್ದೇಶನಾಲಯಕ್ಕೆ ಅಸ್ತಿ ಮುಟ್ಟುಗೋಲು ಹಾಕಿ, ಶಂಕಿತರನ್ನು ವಿಚಾರಣೆ ನಡೆಸುವ ಅಧಿಕಾರವನ್ನು ನೀಡಲಾಗಿದೆ. ಹಣ ವರ್ಗಾವಣೆಯಾಗಿರುವುದರ ಕುರಿತು ಇಡಿ ಸೂಕ್ತ ತನಿಖೆ ನಡೆಸದೆ ಇರುವುದು ತನಿಖೆ ದುರ್ಬಲಗೊಳ್ಳುವಂತೆ ಮಾಡಿದೆ ಎಂಬುದು ಸದ್ಯಕ್ಕೆ ಕೇಳಿಬಂದಿರುವ ಹೊಸ ಆರೋಪವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT