ಮನೋಹರ್ ಪರಿಕ್ಕರ್ 
ದೇಶ

ಅಗಸ್ಟಾ ವೆಸ್ಟ್ ಲ್ಯಾಂಡ್ ಏಕೈಕ ಬಿಡ್ಡರ್ ಆಗುವ ಪರಿಸ್ಥಿತಿ ನಿರ್ಮಿಸಿದ್ದ ಯುಪಿಎ: ಮನೋಹರ್ ಪರಿಕ್ಕರ್

ಯುಪಿಎ ಸರ್ಕಾರ ವಿವಿಐಪಿ ಹೆಲಿಕಾಫ್ಟರ್ ಪೂರೈಕೆ ಒಪ್ಪಂದದಲ್ಲಿ ಒಂದೇ ಮಾರಾಟ ಸಂಸ್ಥೆ ಇರುವ ಪರಿಸ್ಥಿತಿಯನ್ನು ನಿರ್ಮಾಣ ಮಾಡಿತ್ತು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಆರೋಪ ಮಾಡಿದ್ದಾರೆ.

ನವದೆಹಲಿ: ಯುಪಿಎ ಸರ್ಕಾರ ವಿವಿಐಪಿ ಹೆಲಿಕಾಫ್ಟರ್ ಪೂರೈಕೆ ಒಪ್ಪಂದದಲ್ಲಿ ಒಂದೇ ಮಾರಾಟ ಸಂಸ್ಥೆ ಇರುವ ಪರಿಸ್ಥಿತಿಯನ್ನು ನಿರ್ಮಾಣ ಮಾಡಿತ್ತು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಆರೋಪ ಮಾಡಿದ್ದಾರೆ.
ಲೋಕಸಭೆಯಲ್ಲಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಬಗ್ಗೆ ಮಾತನಾಡಿದ ಮನೋಹರ್ ಪರಿಕ್ಕರ್, ಹಗರಣದ ಸಂಬಂಧ ಸಿಬಿಐ 2013 ರ ಮೇ ತಿಂಗಳಲ್ಲೇ ಎಫ್ಐಆರ್ ದಾಖಲಿಸಿತ್ತು. ಆದರೆ ಸಿಬಿಐ ನ ಎಫ್ಐ ಆರ್ ಪ್ರತಿಯನ್ನು 2013 ರ ಡಿಸೆಂಬರ್ ವರೆಗೂ ಜಾರಿ ನಿರ್ದೇಶನಾಲಯಕ್ಕೆ ಕಳಿಸಿರಲಿಲ್ಲ ಎಂದು ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಹಗರಣ ನಡೆದರೂ ಯುಪಿಎ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ, ನಂತರ 2014 ರಲ್ಲಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಅರುಣ್ ಜೇಟ್ಲಿ ರಕ್ಷಣಾ ಸಚಿವರಾದಾಗ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣವನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಂಡಿತು ಎಂದು ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ. ಮುಂದುವರೆದು ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮನೋಹರ್ ಪರಿಕ್ಕರ್,  ಅವ್ಯವವಹಾರ ನಡೆದಿದೆ ಎಂಬುದು ತಿಳಿದ ನಂತರವೂ ಯುಪಿಎ ಸರ್ಕಾರ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಗೆ ಮೂರು ಹೆಲಿಕಾಫ್ಟರ್ ಗಳನ್ನು ಪೂರೈಕೆ ಮಾಡಲು ಅವಕಾಶ ಮಾಡಿತ್ತು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT