ಉತ್ತರಾಖಂಡ್ ಹೈಕೋರ್ಟ್ 
ದೇಶ

ಕಾಂಗ್ರೆಸ್ ಬಂಡಾಯ ಶಾಸಕರ ಅನರ್ಹತೆ: ತೀರ್ಪು ಕಾಯ್ದಿರಿಸಿದ ಉತ್ತರಾಖಂಡ್ ಹೈಕೋರ್ಟ್

9 ಕಾಂಗ್ರೆಸ್ ಬಂಡಾಯ ಶಾಸಕರನ್ನು ಉತ್ತರಾಖಂಡ ವಿಧಾನಸಭೆಯಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ...

ನೈನಿತಾಲ್: 9 ಕಾಂಗ್ರೆಸ್ ಬಂಡಾಯ ಶಾಸಕರನ್ನು ಉತ್ತರಾಖಂಡ ವಿಧಾನಸಭೆಯಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಉತ್ತರಾಖಂಡ್ ಹೈಕೋರ್ಟ್, ತೀರ್ಪನ್ನು ಮೇ 9ಕ್ಕೆ ಕಾಯ್ದಿರಿಸಿದೆ.
ಇಂದು ಸಹ ಅನರ್ಹತೆ ಪ್ರಶ್ನಿಸಿ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದುವರೆಸಿದ ನ್ಯಾಯಮೂರ್ತಿ ಯುಸಿ ಧ್ಯಾನಿ ಅವರು, ಸುಮಾರು 3 ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿದರು. ಬಳಿಕ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು, ಸೋಮವಾರ ಬೆಳಗ್ಗೆ 10.15ಕ್ಕೆ ತೀರ್ಪು ಪ್ರಕಟಿಸುವುದಾಗಿ ಘೋಷಿಸಿದರು. 
ತಮ್ಮನ್ನು ಅನರ್ಹಗೊಳಿಸಿದ ವಿಧಾನಸಭಾಧ್ಯಕ್ಷರ ಕ್ರಮದ ವಿರುದ್ಧ 9 ಕಾಂಗ್ರೆಸ್ ಬಂಡಾಯ ಶಾಸಕರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಮಧ್ಯೆ ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಹರೀಶ್ ರಾವತ್ ಅವರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಆದರೆ ಬಂಡಾಯ ಶಾಸಕರು ಮತದಾನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT