ಉತ್ತರಾಖಂಡ್ ಹೈಕೋರ್ಟ್ 
ದೇಶ

ಕಾಂಗ್ರೆಸ್ ಬಂಡಾಯ ಶಾಸಕರ ಅನರ್ಹತೆ: ತೀರ್ಪು ಕಾಯ್ದಿರಿಸಿದ ಉತ್ತರಾಖಂಡ್ ಹೈಕೋರ್ಟ್

9 ಕಾಂಗ್ರೆಸ್ ಬಂಡಾಯ ಶಾಸಕರನ್ನು ಉತ್ತರಾಖಂಡ ವಿಧಾನಸಭೆಯಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ...

ನೈನಿತಾಲ್: 9 ಕಾಂಗ್ರೆಸ್ ಬಂಡಾಯ ಶಾಸಕರನ್ನು ಉತ್ತರಾಖಂಡ ವಿಧಾನಸಭೆಯಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಉತ್ತರಾಖಂಡ್ ಹೈಕೋರ್ಟ್, ತೀರ್ಪನ್ನು ಮೇ 9ಕ್ಕೆ ಕಾಯ್ದಿರಿಸಿದೆ.
ಇಂದು ಸಹ ಅನರ್ಹತೆ ಪ್ರಶ್ನಿಸಿ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದುವರೆಸಿದ ನ್ಯಾಯಮೂರ್ತಿ ಯುಸಿ ಧ್ಯಾನಿ ಅವರು, ಸುಮಾರು 3 ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿದರು. ಬಳಿಕ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು, ಸೋಮವಾರ ಬೆಳಗ್ಗೆ 10.15ಕ್ಕೆ ತೀರ್ಪು ಪ್ರಕಟಿಸುವುದಾಗಿ ಘೋಷಿಸಿದರು. 
ತಮ್ಮನ್ನು ಅನರ್ಹಗೊಳಿಸಿದ ವಿಧಾನಸಭಾಧ್ಯಕ್ಷರ ಕ್ರಮದ ವಿರುದ್ಧ 9 ಕಾಂಗ್ರೆಸ್ ಬಂಡಾಯ ಶಾಸಕರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಮಧ್ಯೆ ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಹರೀಶ್ ರಾವತ್ ಅವರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಆದರೆ ಬಂಡಾಯ ಶಾಸಕರು ಮತದಾನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT