ಸಾಂದರ್ಭಿಕ ಚಿತ್ರ 
ದೇಶ

ರಾಜಕಾರಣಿಯ ಕಾರನ್ನು ಓವರ್‌ಟೇಕ್ ಮಾಡಿದ್ದಕ್ಕೆ ಯುವಕನನ್ನು ಗುಂಡಿಕ್ಕಿ ಕೊಂದರು!

ಜನತಾದಳ (ಸಂಯುಕ್ತ) ರಾಜಕಾರಣಿಯ ಮಗ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರನ್ನು ಓವರ್‌ಟೇಕ್ ಮಾಡಿದ್ದಕ್ಕಾಗಿ ಯುವಕನೊಬ್ಬನನ್ನು ಗುಂಡಿಕ್ಕಿ ...

ಗಯಾ: ಜನತಾದಳ (ಸಂಯುಕ್ತ) ರಾಜಕಾರಣಿಯ ಮಗ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರನ್ನು ಓವರ್‌ಟೇಕ್ ಮಾಡಿದ್ದಕ್ಕಾಗಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಬಿಹಾರದ ಖ್ಯಾತ ಉದ್ಯಮಿಯೊಬ್ಬರ 19ರ ಹರೆಯದ ಮಗ ಆದಿತ್ಯ ಸಚ್‌ದೇವ ಗುಂಡಿಗೆ ಬಲಿಯಾದ ದುರ್ದೈವಿ. ಈಗಷ್ಟೇ 12 ನೇ ತರಗತಿಯ ಪರೀಕ್ಷೆ ಮುಗಿಸಿದ್ದ ಆದಿತ್ಯ, ತನ್ನ ಗೆಳೆಯರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಜೆಡಿಯು ನಾಯಕಿ ಮನೋರಮಾ ದೇವಿ ಅವರಿಗೆ ಸೇರಿದ ರೇಂಜ್ ರೋವರ್‌ನ್ನು ಆದಿತ್ಯನ ಕಾರು ಓವರ್‌ಟೇಕ್ ಮಾಡಿತ್ತು. ಮನೋರಮಾ ದೇವಿ ಅವರು ಬಿಹಾರದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದು,ಅವರ ಪತಿ ಬಿಂದಿ ಯಾದವ್ ಕುಖ್ಯಾತ ಗೂಂಡಾ ಆಗಿದ್ದಾನೆ.
ಓವರ್‌ಟೇಕ್ ಮಾಡಿದ ಕೂಡಲೇ ಕಾರಿನಲ್ಲಿದ್ದ ಮನೋರಮಾ ದೇವಿ ಅವರ ಪುತ್ರ ರೋಕಿ ಮತ್ತು ಆತನ ಬಾಡಿಗಾರ್ಡ್  ನಮ್ಮ ಕಾರಿನ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ನಾವು ಬೋದ್‌ಗಯಾದಿಂದ ಮರಳುತ್ತಿದ್ದ ವೇಳೆ ಈ ಘಟನೆ  ನಡೆದಿತ್ತು. ಗುಂಡಿನ ದಾಳಿ ನಡೆದ ಕೂಡಲೇ ನಾವು ಕಾರು ನಿಲ್ಲಿಸಿದೆವು. ಅವರು ನಮ್ಮನ್ನು ಕಾರಿನಿಂದ ಬಲವಂತವಾಗಿ ಹೊರಗೆಳೆದರು. ನಾವು ಅಲ್ಲಿಂದ ಹೊರಡಲನುವಾದಾಗ ಯಾರೋ ಒಬ್ಬರು ಗುಂಡು ಹಾರಿಸಿದರು ಅದು ನನ್ನ ಗೆಳೆಯನಿಗೆ ತಾಗಿತು. ಆ ಕಾರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಇದ್ದದ್ದನ್ನು ನಾನು ನೋಡಿದೆ ಎಂದು ಆದಿತ್ಯನ ಗೆಳೆಯ ಆಯುಷ್ ಹೇಳಿದ್ದಾನೆ. 
ಪೊಲೀಸರು ಬಾಡಿಗಾರ್ಡ್ ರಾಜೇಶ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದು,  ರೋಕಿ ತಲೆ ಮರೆಸಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT