ದಾವೂದ್ ಇಬ್ರಾಹಿಂ 
ದೇಶ

ಹಿಂದೂ ನಾಯಕರನ್ನು ಹತ್ಯೆ ಮಾಡಿದರೆ ದಕ್ಷಿಣ ಆಫ್ರಿಕಾದಲ್ಲಿ ಉತ್ತಮ ನೌಕರಿ: ದಾವೂದ್ ನ ಡಿ ಕಂಪನಿಯ ಆಮಿಷ

ಡಿ-ಕಂಪನಿ ಕೋಮುಗಲಭೆ ಸೃಷ್ಟಿಸಿ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡುವುದಕ್ಕೆ ಒಡ್ಡಿದ ಆಮಿಷಗಳೂ ಬಹಿರಂಗವಾಗತೊಡಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹವಣಿಸುತ್ತಿರುವುದು ಬೆಳಕಿಗೆ ಬಂದ ಬೆನ್ನಲ್ಲೇ, ಡಿ-ಕಂಪನಿ ಕೋಮುಗಲಭೆ ಸೃಷ್ಟಿಸಿ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡುವುದಕ್ಕೆ ಒಡ್ಡಿದ ಆಮಿಷಗಳೂ ಬಹಿರಂಗವಾಗತೊಡಗಿದೆ. 
ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಿ ಕೋಮುಗಲಭೆ ಸೃಷ್ಟಿ ಮಾಡುವುದಕ್ಕಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದವರಿಗೆ ದಕ್ಷಿಣ ಆಫ್ರಿಕಾದಲ್ಲಿ ಹಣ ಹಾಗೂ ಉತ್ತಮ ನೌಕರಿ ಕೊಡಿಸುವುದಾಗಿ ಡಿ ಕಂಪನಿ ಆಮಿಷವೊಡ್ಡುತ್ತಿತ್ತು ಎಂದು ಅಹಮದಾಬಾದ್ ಕೋರ್ಟ್ ಗೆ ಎನ್ ಐಎ ಸಲ್ಲಿಸಿರುವ ವರದಿಯಲ್ಲಿ ಹೇಳಿರುವ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟಿಸಿದೆ.
ಕೋಮು ಗಲಭೆ ಸೃಷ್ಟಿಸಲೆಂದೇ ನೇಮಕವಾದವರಿಗೆ ಭಾರತದಲ್ಲಿ ಪೆಟ್ರೋಲ್ ಬಾಂಬ್ ಗಳನ್ನು ಸ್ಫೋಟಿಸಲು ಹಾಗೂ ಚರ್ಚ್ ಗಳ ಮೇಲೆ ದಾಳಿ ನಡೆಸಲು ಸೂಚನೆ ನೀಡಲಾಗುತ್ತಿತ್ತು ಎಂದು ವರದಿಯ ಮೂಲಕ ತಿಳಿದುಬಂದಿದೆ. ಇನ್ನು  ಆರ್ ಎಸ್ ಎಸ್, ವಿಶ್ವ ಹಿಂದೂ ಪರಿಷತ್ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಲು ಡಿ-ಕಂಪನಿಯ ಪ್ರಮುಖ ಪಾತಕಿಗಳಾದ ಜಾವೆದ್ ಚಿಕ್ನ ಅವರಿಗೆ ನೀಡಲಾಗಿದ್ದ 50 ಲಕ್ಷ ರೂ, ದುಬೈ ನಿಂದ ಹವಾಲ ಮೂಲಕ ಗುಜರಾತ್ ಗೆ ಕಳಿಸಲಾಗಿತ್ತು ಎಂಬುದೂ ಬಹಿರಂಗವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT