ಸಾಂದರ್ಭಿಕ ಚಿತ್ರ 
ದೇಶ

ನೀರು ಕದ್ದಿದ್ದಕ್ಕೆ 55 ವರ್ಷದ ರೈತನಿಗೆ ಬಂಧನದ ಶಿಕ್ಷೆ

ಬರಪೀಡಿತ ಉತ್ತರ ಪ್ರದೇಶದ ಬಂದೇಲುಖಂಡದ ಉರ್ಮಿಲ್ ಜಲಾಶಯದಿಂದ ನೀರು ಕದ್ದ ಆರೋಪದ ಮೇಲೆ 55 ವರ್ಷದ ರೈತನನ್ನು ಬಂಧಿಸಲಾಗಿದೆ...

ನವದೆಹಲಿ: ಬರಪೀಡಿತ ಉತ್ತರ ಪ್ರದೇಶದ ಬಂದೇಲುಖಂಡದ ಉರ್ಮಿಲ್ ಜಲಾಶಯದಿಂದ ನೀರು ಕದ್ದ ಆರೋಪದ ಮೇಲೆ 55 ವರ್ಷದ ರೈತನನ್ನು ಬಂಧಿಸಲಾಗಿದೆ.

ಹಿರಾ ಲಾಲ್ ಯಾದವ್ ಬಂಧಿತ ರೈತ. ಈತ ಉರ್ಮಿ ಜಲಾಶಯದಿಂದ ಸಣ್ಣ ಕಾಲುವೆ ಮೂಲಕ ನೀರನ್ನು ತನ್ನ ಜಮೀನಿಗೆ ಹಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಜಲಾಶಯದ ಒಂದು ಭಾಗದಲ್ಲಿ ಸಣ್ಣ ಬಿರುಕು ಉಂಟಾಗಿ ಅದರಿಂದ ನೀರು ಬರುತ್ತಿತ್ತು. ಸೋರಿಕೆಯಾಗುತ್ತಿದ್ದ ನೀರನ್ನು ತಮ್ಮ ಜಮೀನಿಗೆ ಹರಿಸಿಕೊಂಡಿದ್ದೇವೆ, ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ತಪ್ಪನ್ನು ಮುಚ್ಚಿಡಲು ನಮ್ಮನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಬಂಧಿತ ರೈತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಜಲಾಶಯದ ಪೈಪ್ ಲೈನ್ ಅನ್ನು ಒಡೆದಿರುವ ಹಿರಾ ಲಾಲ್ ಆ ನೀರನ್ನು ತನ್ನ ವ್ಯವಸಾಯಕ್ಕೆ ಬಳಸಿಕೊಂಡಿದ್ದಾನೆ ಎಂದು ನೀರಾವರಿ ಇಲಾಖೆ ಜಂಟಿ ಅಭಿಯಂತರ ದೂರು ನೀಡಿದ್ದಾರೆ, ಸರ್ಕಾರದ ಆಸ್ತಿಗೆ ಹಾನಿ ಮಾಡಿರುವ ಪ್ರಕರಣದಲ್ಲಿ ಸೆಕ್ಷನ್ 430, 353 ಪ್ರಕಾರ ಆತನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಸೂಪರಿಂಟೆಂಡ್ ಆಫ್ ಪೊಲೀಸ್ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬಂದೇಲುಖಂಡ ಸತತ ಮೂರನೇ ವರ್ಷವೂ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT