ರಾಜ್ಯಸಭೆ (ಸಂಗ್ರಹ ಚಿತ್ರ) 
ದೇಶ

ಕೇಂದ್ರ ಸರ್ಕಾರದ ಎನಿಮಿ ಆಸ್ತಿ ಕಾಯ್ದೆ ತಿದ್ದುಪಡಿಗೆ ರಾಜ್ಯಸಭೆಯ ಅಂಗೀಕಾರ ಅನುಮಾನ?

ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದ ಎನಿಮಿ ಪ್ರಾಪರ್ಟಿ(ಶತೃ ಆಸ್ತಿ) ತಿದ್ದುಪಡಿ ಕಾಯ್ದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆಯುವುದು ಅನುಮಾನವಾಗಿದೆ.

ನವದೆಹಲಿ: ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದ ಎನಿಮಿ ಪ್ರಾಪರ್ಟಿ(ಶತೃ ಆಸ್ತಿ) ತಿದ್ದುಪಡಿ ಕಾಯ್ದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆಯುವುದು ಅನುಮಾನವಾಗಿದೆ.
ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿರುವ ನಾಲ್ಕು ಪಕ್ಷಗಳು, ಈ ಹಿಂದಿನ ಕಾಯ್ದೆ ಹೆಚ್ಚು ಸಮತೋಲನವಾಗಿತ್ತು. ಆದರೆ ತಿದ್ದುಪಡಿ ಕಾಯ್ದೆ ಸ್ವಾಭಾವಿಕ ನ್ಯಾಯದ ಮೂಲ ಆಶಯಗಳಿಗೆ ವಿರುದ್ಧವಾಗಿದೆ ಎಂದು ತಗಾದೆ ತೆಗೆದಿವೆ. ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ಜೆಡಿಯು, ಸಿಪಿಐ ಹಾಗೂ ಸಮಾಜವಾದಿ ಪಕ್ಷ, ಕಾಯ್ದೆಯಲ್ಲಿ ಮಾಡಿರುವ ಬದಲಾವಣೆಗಳು ಲಕ್ಷಾಂತರ ಭಾರತೀಯ ನಾಗರಿಕರಿಗೆ ಶಿಕ್ಷೆ ವಿಧಿಸುವಂತಿದೆಯೇ ಹೊರತು ಶತೃ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ ಎಂದು ಅಭಿಪ್ರಾಯಪಟ್ಟಿವೆ.  
ಇನ್ನು ಶತ್ರು ಆಸ್ತಿ ಕಾಯ್ದೆ ತಿದ್ದುಪಡಿ ಕುರಿತ  ಸೆಲೆಕ್ಟ್ ಕಮಿಟಿ ವರದಿಯಲ್ಲಿ ಅಭಿಪ್ರಾಯ ಮಂಡಿಸಿರುವ ನಾಲ್ಕೂ ಪಕ್ಷದ ಪ್ರತಿನಿಧಿಗಳು ತಿದ್ದುಪಡಿ ಕಾಯ್ದೆಗೆ ಅಸಮ್ಮತಿ ಟಿಪ್ಪಣಿಗಳನ್ನು ನೀಡಿದ್ದಾರೆ. ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಹೊಂದಿರುವ ಆಸ್ತಿಯ ಮೇಲೆ ಅಧಿಕಾರ ಹೊಂದಲು ಶತೃ ಆಸ್ತಿ ಕಾಯ್ದೆಯಿಂದ ಸಾಧ್ಯವಾಗಲಿದೆ 1965ರ ಭಾರತ-ಪಾಕ್ ಯುದ್ದದ ಬಳಿಕ 1968ರಲ್ಲಿ ಘೋಷಣೆಯಾಗಿದ್ದ 47 ವರ್ಷಗಳ ಹಿಂದಿನ ಈ ಶತ್ರು ಆಸ್ತಿ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು. ತಿದ್ದುಪಡಿ ಕಾಯ್ದೆ ಮೂಲಕ ವೈರಿ ಮರಣ ಹೊಂದಿರುವನೋ ಅಥವಾ ನಾಶವಾಗಿರುವನೋ ಎನ್ನುವುದನ್ನು ಪರಿಗಣಿಸದೆ, ರಕ್ಷಕರ ಅಧೀನದಲ್ಲಿರುವ ಆಸ್ತಿಯ ಮೇಲೆ ಹಕ್ಕು ಹೊಂದಬಲ್ಲ ಅಧಿಕಾರ ನೀದಲಾಗಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಈ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗದಿದ್ದರೂ ಅನುಮೋದನೆ ಪಡೆಯುವುದು ಸಾಧ್ಯವಾಗಿರಲ್ಲಿಲ್ಲ. ಇದೀಗ ರಾಜ್ಯಸಭೆಯಲ್ಲೂ ತಿದ್ದುಪಡಿ ಮಸೂದೆ ಅಂಗೀಕಾರವಾಗುವುದು ಅನುಮಾನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT