ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿದ ಜಿಶಾಗೆ ಶ್ರದ್ಧಾಂಜಲಿ ಸಲ್ಲಿಸುತ್ತಿರುವುದು 
ದೇಶ

ಜಿಶಾ ಅತ್ಯಾಚಾರ ಪ್ರಕರಣ: ಕುಟುಂಬ ಸದಸ್ಯರ ಹೇಳಿಕೆಗೆ ವ್ಯತಿರಿಕ್ತವಾಗಿರುವ ಮರಣೋತ್ತರ ಪರೀಕ್ಷೆ ವರದಿ?

ಜಿಶಾ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಜಿಶಾ ಕುಟುಂಬ ಸದಸ್ಯರು ನೀಡಿರುವ ಹೇಳಿಕೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿರುವ ಕೆಲವು ಅಂಶಗ ವ್ಯತಿರಿಕ್ತವಾಗಿದೆ.

ಕೇರಳದ ಕಾನೂನು ವಿದ್ಯಾರ್ಥಿನಿ ಜಿಶಾ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಜಿಶಾ ಕುಟುಂಬ ಸದಸ್ಯರು ನೀಡಿರುವ ಹೇಳಿಕೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿರುವ ಕೆಲವು ಅಂಶಗಳೊಂದಿಗೆ ಹೊಂದಾಣಿಕೆಯಾಗದೆ ವ್ಯತಿರಿಕ್ತವಾಗಿದೆ.
ಮರಣೋತ್ತರ ಪರೀಕ್ಷೆ ವರದಿ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದ್ದು ಈ ಬಗ್ಗೆ ವರದಿ ಪ್ರಕಟಿಸಿದೆ. ಜಿಶಾ ಕುಟುಂಬ ಸದಸ್ಯರು, ನೆರೆಯವರು ನೀಡಿರುವ ಮಾಹಿತಿ ಪ್ರಕಾರ ಸಂಜೆ 6 ಗಂಟೆ ಸಮಯದಲ್ಲಿ ಜಿಶಾ ಅತ್ಯಾಚಾರ, ಕೊಲೆ ನಡೆದಿದ್ದು 8 :30 ಕ್ಕೆ ಜಿಶಾ ಶವನ್ನು ಆಕೆಯ ತಾಯಿಗೆ ಕಂಡಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿಯ ಪ್ರಕಾರ ಜಿಶಾಳ ಹತ್ಯೆ ನಡೆದಿರುವುದು 9 ಗಂಟೆ ವೇಳೆಯಲ್ಲಿ ಎಂದು ಹೇಳಲಾಗಿದೆ.

ಕುಟುಂಬ ಸದಸ್ಯರು ತನಿಖಾಧಿಕಾರಿಗೆ ನೀಡಿರುವ ಮಾಹಿತಿ ಹಾಗೂ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳ ವರದಿಗೆ ವ್ಯತಿರಿಕ್ತವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆ ವರದಿಯ ಪ್ರಮುಖಾಂಶಗಳು:

*ಉಸಿರುಗಟ್ಟಿಸಿ ಜಿಶಾಳನ್ನು ಹತ್ಯೆ ಮಾಡಲಾಗಿದ್ದು, ಗುಪ್ತಾಂಗ, ಕುತ್ತಿಗೆ, ಹೊಟ್ಟೆ ಭಾಗಗಳಲ್ಲಿ ಗಾಯಗಳಿರುವುದು ಪತ್ತೆಯಾಗಿದೆ.
* ಜಿಶಾ ಅತ್ಯಾಚಾರಕ್ಕೊಳಗಾಗಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಪಷ್ಟವಾಗಿದೆ.
*ಮರಣೋತ್ತರ ಪರೀಕ್ಷೆಯಲ್ಲಿ  ಉಗುರು, ಕೂದಲಿನ ಮಾದರಿ ಸೇರಿದಂತೆ ಜಿಶಾಳ ದೇಹದ ಕೆಲವು ಅಂಶಗಳನ್ನು ಪಡೆಯಲಾಗಿದ್ದು ಕೆಮಿಕಲ್ ಪರೀಕ್ಷೆಗೆ ಕಳಿಸಲಾಗಿದೆ.
* ಸತತ ಮೂರು ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆ ನಡೆಸಿ, ನಂತರ ಪೆರುಂಬವೂರ್ ನಲ್ಲಿ ಜಿಶಾ ಅಂತ್ಯಕ್ರಿಯೆ ನಡೆಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT