ನರೇಂದ್ರ ಮೋದಿ 
ದೇಶ

ಗ್ರಾಮೀಣ ಅಭಿವೃದ್ಧಿ ಬಗ್ಗೆ ಕಾಳಜಿ ಇರುವ ಐಎಎಸ್ ಅಧಿಕಾರಿಗಳಿದ್ದಾರಾ? ಪ್ರಧಾನಿ ಮೋದಿಗೆ ತುರ್ತಾಗಿ ಬೇಕಾಗಿದ್ದಾರೆ!

ನೀವು ಐಎಎಸ್ ಅಧಿಕಾರಿಗಳಾಗಿದ್ದುಕೊಂಡು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಬಗ್ಗೆ ಕಾಳಜಿಹೊಂದಿದ್ದೀರಾ? ಪ್ರಧಾನಿ ನರೇಂದ್ರ ಮೋದಿ ಅಂತಹ ಅಧಿಕಾರಿಗಳಿಗಾಗಿ ಹುಡುಕುತ್ತಿದ್ದಾರೆ.

ನವದೆಹಲಿ: ನೀವು ಐಎಎಸ್ ಅಧಿಕಾರಿಗಳಾಗಿದ್ದು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಬಗ್ಗೆ ಕಾಳಜಿಹೊಂದಿದ್ದೀರಾ? ಹಾಗಾದರೆ ಪ್ರಧಾನಿ ಮೋದಿ ನಿಮಗಾಗಿ ಕಾಯುತ್ತಿದ್ದಾರೆ!
ಹೌದು, ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಸೂಕ್ತ ಕಾರ್ಯದರ್ಶಿಗಾಗಿ ಪ್ರಧಾನಿ ನರೇಂದ್ರ ಮೋದಿ ಹುಡುಕುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಜೆಕೆ ಮೋಹಪತ್ರ ಅವರ ನಿವೃತ್ತಿಯಿಂದಾಗಿ 2016 ರ ಜನವರಿಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆ ಖಾಲಿ ಇದ್ದು ಪಂಚಾಯತ್ ರಾಜ್ ಕಾರ್ಯದರ್ಶಿಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ   ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಇಲಾಖೆಗೆ ಸೂಕ್ತ ಕಾರ್ಯದರ್ಶಿಯ ನೇಮಕಕ್ಕೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, ಗ್ರಾಮೀಣಾಭಿವೃದ್ಧಿ ಬಗ್ಗೆ ಕಾಳಜಿ ಹೊಂದಿರುವ ಐಎಎಸ್ ಅಧಿಕಾರಿಗಳಿಗಾಗಿ ಎದುರುನೋಡುತ್ತಿದ್ದಾರೆ. 1984 -1985 ಕೇಡರ್ ನ ಹಲವು ಅಧಿಕಾರಿಗಳ ಹೆಸರುಗಳನ್ನು ಸೂಚಿಸಲಾಯಿತಾದರೂ, ಪ್ರಧಾನಿ ಕಾರ್ಯಾಲಯ ಯಾವ ಹೆಸರನ್ನೂ ಅಂತಿಮಗೊಳಿಸಲಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಬಲ್ಲ, ಮುಂದಿನ ದಿನಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯನ್ನು ಸರ್ಕಾರದ ಚಾಲನಾ ಶಕ್ತಿಯನ್ನಾಗಿಸುವ ಸಾಮರ್ಥ್ಯ ಹೊಂದಿರುವವರನ್ನು ಪ್ರಧಾನಿ ನರೇಂದ್ರ ಮೋದಿ ಹುಡುಕುತ್ತಿದ್ದಾರೆ.
ಪ್ರಧಾನಿ ಕಾರ್ಯಾಲಯ, ಗ್ರಾಮೀಣಾಭಿವೃದ್ಧಿ, ನೀತಿ ಆಯೋಗ ಗ್ರಾಮೀಣ ಪ್ರದೇಶಕ್ಕೆ ಸಂಬಂಧಿಸಿದಂತೆ  ಪಿಪಿಪಿ ಮಾಡೆಲ್ ಸೇರಿದಂತೆ ಹಲವು ಯೋಜನೆಗಳಿಗೆ ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮೊಬೈಲ್ ಮೂಲಕ ನಗದು ವರ್ಗಾವಣೆ ಮಾಡುವ ಯೋಜನೆಯನ್ನು ಪರಿಚಯಿಸಸುವುದು ಸೇರಿದಂತೆ ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ನವೀನ ಪರಿಕಲ್ಪನೆಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದ್ದರಿಂದ ಗ್ರಾಮೀಣ ಭಾಗಕ್ಕೆ ಗೇಮ್ ಚೇಂಜರ್ ನಂತಹ ವಿಶೇಷ ಸಾಮರ್ಥ್ಯವುಳ್ಳ ಅಧಿಕಾರಿಗಾಗಿ ಹುಡುಕಲಾಗುತ್ತಿದೆ ಎಂದು ಪಿಎಂಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT