ಅಗ್ನಿ-5 ಕ್ಷಿಪಣಿ (ಸಂಗ್ರಹ ಚಿತ್ರ) 
ದೇಶ

ಆಗಸದಲ್ಲಿ ಘರ್ಜಿಸಲು ಸಿದ್ಧವಾಯ್ತು "ಅಗ್ನಿ-5" ಅಣ್ವಸ್ತ್ರ ಕ್ಷಿಪಣಿ

ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಆಗಸದಲ್ಲಿ ಘರ್ಜಿಸಲು ಸಿದ್ಧವಾಗಿದ್ದು, ಸುಮಾರು 5 ಸಾವಿರ ದೂರ ಕ್ರಮಿಸಲಬಲ್ಲ ಈ ದೂರಗಾಮಿ ಕ್ಷಿಪಣಿ ಇದೀಗ ಪಾಕಿಸ್ತಾನ ಮತ್ತು ಚೀನಾ ದೇಶಗಳ ತಲೆನೋವಿಗೆ ಕಾರಣವಾಗಿದೆ.

ಬಾಲಸೋರ್: ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಆಗಸದಲ್ಲಿ ಘರ್ಜಿಸಲು ಸಿದ್ಧವಾಗಿದ್ದು, ಸುಮಾರು 5 ಸಾವಿರ ದೂರ ಕ್ರಮಿಸಲಬಲ್ಲ ಈ ದೂರಗಾಮಿ ಕ್ಷಿಪಣಿ ಇದೀಗ ಪಾಕಿಸ್ತಾನ ಮತ್ತು ಚೀನಾ ದೇಶಗಳ ತಲೆನೋವಿಗೆ ಕಾರಣವಾಗಿದೆ.

ಭಾರತದ ಹೆಮ್ಮೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಈ ಪ್ರಬಲ ಅಣ್ವಸ್ತ್ರ ಕ್ಷಿಪಣಿಯನ್ನು ಸಿದ್ಧಪಡಿಸಿದ್ದು, ಪಾಕಿಸ್ತಾನದ ಪ್ರದೇಶಗಳು ಒಳಂಗೊಂಡಂತೆ ಚೀನಾದ ಯಾವುದೇ ಭಾಗ ಮತ್ತು ಪಶ್ಚಿಮದಲ್ಲಿ ಯುರೋಪ್‌ನ ಕೊನೆಯ ಅಂಚಿನವರೆಗೂ ಕ್ಷಿಪಣಿಯು ತಲುಪುವ ಸಾಮರ್ಥ್ಯ ಹೊಂದಿದೆ. ಅಗ್ನಿ-5 ಮೂರು ಸ್ತರದ ಕ್ಷಿಪಣಿಯಾಗಿದ್ದು,17 ಮೀ. ಉದ್ದ ಮತ್ತು 1.5 ಟನ್‌ ಭಾರ ಹೊಂದಿದೆ. ಮೊದಲನೇ ಸ್ತರದ ರಾಕೆಟ್‌ ಎಂಜಿನ್‌, ಕ್ಷಿಪಣಿಯನ್ನು 40 ಕಿ.ಮೀ. ಎತ್ತರಕ್ಕೆ ಒಯ್ದರೆ, ಎರಡನೇ ಸ್ತರವು ಕ್ಷಿಪಣಿಯನ್ನು 150 ಕಿ.ಮೀ. ಎತ್ತರಕ್ಕೆ ನೂಕುತ್ತದೆ. 3ನೇ ಸ್ತರವು ಭೂಮಿಗಿಂತ 300 ಕಿ.ಮೀ. ಎತ್ತರಕ್ಕೆ ಕೊಂಡೊಯ್ಯುತ್ತದೆ. ಅಂತಿಮವಾಗಿ 800 ಕಿ.ಮೀ. ಎತ್ತರಕ್ಕೆ ಕ್ಷಿಪಣಿ ತಲುಪುತ್ತದೆ.



ಸುಮಾರು 1 ಸಾವಿರ ಕೆಜಿ ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಈ ಪ್ರಬಲ ಕ್ಷಿಪಣಿಗಿದ್ದು, ಸಂಚಾರಿ ಸಾಮರ್ಥ್ಯ ಇರುವ ಡಬ್ಬಿಯಾಕಾರದ ಕ್ಯಾನಿಸ್ಟರ್‌ನಲ್ಲಿಟ್ಟು ಉಡಾಯಿಸುವಂಥ ಅಗ್ನಿ-5 ಮಾದರಿಯ ಕ್ಷಿಪಣಿ ಇದು. ಉಡಾವಣೆಗೆ ಸ್ಥಿರ ವೇದಿಕೆಯೇ ಬೇಕೆಂದೇನೂ ಇಲ್ಲ. ಮೊಬೈಲ್‌ ಲಾಂಚರ್‌ ವಾಹನ ಬಳಕೆ ಮಾಡಿ ಈ ಕ್ಷಿಪಣಿಯನ್ನು ದೇಶದ ಯಾವುದೇ ಮೂಲೆಯಿಂದಾದರೂ ತ್ವರಿತವಾಗಿ ಉಡಾಯಿಸಬಹುದಾಗಿದೆ. ಇನ್ನು ಕ್ಷಿಪಣಿಯ ಕ್ಯಾನಿಸ್ಟರ್‌ ವ್ಯವಸ್ಥೆ ವೈರಿಗಳ ಕಣ್ತಪ್ಪಿಸಲು ಸಹಕಾರಿಯಾಗುತ್ತದೆ. ಇದೇ ಕಾರಣಕ್ಕೆ ಭಾರತದ ಈ ಪ್ರಬಲ ಕ್ಷಿಪಣಿ ಇದೀಗ ಚೀನಾ ಮತ್ತು ಪಾಕಿಸ್ತಾನ ದೇಶಗಳ ತಲೆನೋವಿಗೆ ಕಾರಣವಾಗಿದೆ.

ಈ ಹಿಂದೆ 2012 ಮತ್ತು 2013 ಮತ್ತು 2015ರಲ್ಲಿ ಒಟ್ಟು 3 ಬಾರಿ ಅಗ್ನಿ-5 ಕ್ಷಿಪಣಿಯ ಮೂಲ ಆವೃತ್ತಿಯ ಪರೀಕ್ಷಾರ್ಥ ಉಡ್ಡಯನ ಮಾಡಲಾಗಿತ್ತು. ಈ ಮೂರೂ ಪರೀಕ್ಷೆಯೂ ಅಭೂತಪೂರ್ವ ಯಶಸ್ಸು ಸಾಧಿಸಿತ್ತು. ಇದೀಗ ಮತ್ತೆ ಅಗ್ನಿ-5 ಕ್ಷಿಪಣಿ ಪರೀಕ್ಷೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಇದನ್ನು ಪರೀಕ್ಷೆ ನಡೆಸಲು ಡಿಆರ್ ಡಿಒ ಸಿದ್ಧತೆ ಮಾಡಿಕೊಂಡಿದೆ.

ಮುಂದಿನ ವರ್ಷ ಸೇನೆಗೆ ಸೇರ್ಪಡೆಯಾಗಲಿದೆ ಈ ಪ್ರಬಲ ಮತ್ತು ವಿಧ್ವಂಸಕ ಕ್ಷಿಪಣಿ
ಎಲ್ಲವೂ ಅಂದುಕೊಂಡಂತೆ ನಡೆದರೆ ಎನ್ನೆರಡು ಪರೀಕ್ಷಾರ್ಥ ಪ್ರಯೋಗಗಳ ಬಳಿಕ ಭಾರತದ ಈ ವಿಧ್ವಂಸಕ ಕ್ಷಿಪಣಿ ಭಾರತೀಯ ಸೇನೆಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿರುವಂತೆ ಮುಂದಿನ ವರ್ಷದೊಳಗಾಗಿ ಈ ಅಗ್ನಿ-5 ಕ್ಷಿಪಣಿಯನ್ನು ಭಾರತೀಯ ಸೇನೆಯ ಕಾರ್ಯಾಚರಣೆಗೆ ಅಳವಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಪ್ರಧಾನಿ ಕೈಯಲ್ಲೇ ಬಟನ್
ಅಗ್ನಿ-5 ಕ್ಷಿಪಣಿಯನ್ನು ಉಡಾವಣೆ ಮಾಡಲು ಅನುಮತಿ ನೀಡುವ ಅಧಿಕಾರ ಪ್ರಧಾನ ದೇಶದ ಮಂತ್ರಿಗೆ ಮಾತ್ರ ಇದ್ದು, ಅಗ್ನಿ-5 ಕ್ಷಿಪಣಿಯನ್ನು ಯುದ್ಧಕ್ಕಿಂತ ಶಾಂತಿ ಉದ್ದೇಶಕ್ಕೆ ಬಳಸುವ ಉದ್ದೇಶವನ್ನು ಭಾರತ ಹೊಂದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಈ ಅಗ್ನಿ 5 ಕ್ಷಿಪಣಿಯ ಕಾರ್ಯಾಚರಣೆಗೆ ಅನುಮತಿ ನೀಡಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT