ಉತ್ತರಾಖಾಂಡ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ 
ದೇಶ

ಸಿಬಿಐ ಮುಂದೆ ಹಾಜರಾಗಲು ಸಮಯ ಕೋರಿದ ಹರೀಶ್ ರಾವತ್

ಕೇಂದ್ರ ಸರ್ಕಾರ ಉತ್ತರಾಖಾಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದರಿಂದ ಹೊರಹಾಕಲಾಗಿರುವ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಂಡಾಯ ಎದ್ದ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು

ಡೆಹ್ರಾಡೂನ್: ಕೇಂದ್ರ ಸರ್ಕಾರ ಉತ್ತರಾಖಾಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದರಿಂದ ಹೊರಹಾಕಲಾಗಿರುವ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಂಡಾಯ ಎದ್ದ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸಿದ ಆರೋಪದ ಪ್ರಕರಣದಲ್ಲಿ, ಪ್ರಶ್ನೆಗಳಿಗೆ ಉತ್ತರಿಸಲು ಸಿಬಿಐ ಮುಂದೆ ಹಾಜರಾಗಲು ಸೋಮವಾರ ಹೆಚ್ಚಿನ ಸಮಯಾವಕಾಶವನ್ನು ಕೋರಿದ್ದಾರೆ.

"ನಮ್ಮ ತೊಂದರೆಗಳನ್ನು ಏಜೆನ್ಸಿ ಅರ್ಥ ಮಾಡಿಕೊಳ್ಳುತ್ತದೆ ಎಂದು ನಂಬಿದ್ದೇನೆ ಮತ್ತು ಹೆಚ್ಚಿನ ಸಮಯ ನೀಡುತ್ತದೆಂದು ಕೂಡ" ಎಂದು ಡೆಹ್ರಾಡೂನ್ ನಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

"ಸಿಬಿಐ ಮುಂದೆ ಹಾಜರಾಗಿ ಅವರು ಕೇಳುವ ಎಲ್ಲ ಮಾಹಿತಿಯನ್ನೂ ನೀಡಲಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದೇನೆ" ಎಂದು ಕೂಡ ಅವರು ತಿಳಿಸಿದ್ದಾರೆ.

ನಾರ್ಕೋ ಅನಲಿಸಿಸ್ ಪರೀಕ್ಷೆಗೂ ತಾವು ಸಿದ್ದ ಎಂದು ಹರೀಶ್ ರಾವತ್ ಹೇಳಿದ್ದಾರೆ.

೭೦ ಸದಸ್ಯರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಂಡಾಯವೆದ್ದಿರುವ ಕಾಂಗ್ರೆಸ್ ಶಾಸಕರಿಗೆ ರಾವತ್ ಲಂಚ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದ ವಿಡಿಯೋ ಪ್ರಕರಣದ ವಿಚಾರಣೆಯಲ್ಲಿ ರಾವತ್ ಅವರಿಗೆ ಸಿಬಿಐ ನೋಟಿಸ್ ನೀಡಿತ್ತು.

ಈ ವಿಡಿಯೋ ಚಿತ್ರೀಕರಣ ನಡೆಸಿದ್ದ ಉಮೇಶ್ ಕುಮಾರ್ ಅವರನ್ನು ಸಿಬಿಐ ಇದಕ್ಕೂ ಮುಂಚೆ ಪ್ರಶ್ನಿಸಿತ್ತು. ಈ ವಿಡಿಯೋ ಸಿಡಿ ನಿಜವಾದದ್ದು ಮತ್ತು ತಿರುಚಲಾಗಿಲ್ಲ ಎಂದು ವಿಧಿ ವಿಜ್ಞಾನ ಪರೀಕ್ಷೆ ಸ್ಪಷ್ಟಪಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT