ನ್ಯಾ. ಟಿಎಸ್ ಠಾಕೂರ್ 
ದೇಶ

ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ 70 ಸಾವಿರ ನ್ಯಾಯಾಧೀಶರ ಅಗತ್ಯ: ಮುಖ್ಯ ನ್ಯಾ. ಟಿಎಸ್ ಠಾಕೂರ್

ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು 70,000 ಕ್ಕೂ ಹೆಚ್ಚು ನ್ಯಾಯಾಧೀಶರು ಬೇಕಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ಟಿಎಸ್ ಠಾಕೂರ್ ಹೇಳಿದ್ದಾರೆ.

ನವದೆಹಲಿ: ಕಡಿಮೆ ಇರುವ ನ್ಯಾಯಾಧೀಶರ ಸಂಖ್ಯೆ ವಿಷಯವನ್ನು ಮತ್ತೊಮ್ಮೆ ಪ್ರಸ್ತಾಪಿಸಿ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ಟಿಎಸ್ ಠಾಕೂರ್ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು 70,000 ಕ್ಕೂ ಹೆಚ್ಚು ನ್ಯಾಯಾಧೀಶರು ಬೇಕಾಗಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ಸಮ್ಮುಖದಲ್ಲಿ ನ್ಯಾಯಾಂಗ ಸುಧಾರಣೆ ಬಗ್ಗೆ ಮಾತನಾಡಿದ್ದ ನ್ಯಾ. ಟಿಎಸ್ ಠಾಕೂರ್, ನ್ಯಾಯಾಧೀಶರ ಕೊರತೆ ಎದುರಾಗಿರುವುದಕ್ಕೆ ಹಾಗೂ ನ್ಯಾಯ ವಿತರಣೆ ವಿಳಂಬವಾಗುತ್ತಿರುವುದಕ್ಕೆ ಕಣ್ಣೀರಿಟ್ಟಿದ್ದರು. ಈಗ ಮತ್ತೊಮ್ಮೆ ನ್ಯಾಯಾಧೀಶರ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದು, ನ್ಯಾಯ ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು ವಿಳಂಬ ನೀತಿ ಅನುಸರಿಸುವಂತಿಲ್ಲ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಹೈಕೋರ್ಟ್ ನ ಸರ್ಕ್ಯೂಟ್ ಬೆಂಚ್ ನ ಶತಮಾನೋತ್ಸವದ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನ್ಯಾ.ಟಿಎಸ್ ಠಾಕೂರ್, ನ್ಯಾಯಾಧೀಶರ ನೇಮಕ ಶೀಘ್ರಗತಿಯಲ್ಲಿ ನಡೆಸಲು ನ್ಯಾಯಾಂಗ ಯತ್ನಿಸುತ್ತಿದೆ. ಆದರೆ ನೇಮಕಾತಿ ಪ್ರಕ್ರಿಯೆಯ ಭಾಗವಾಗಿರುವ ಕಾರ್ಯಾಂಗ ಇದಕ್ಕೆ ಪೂರಕವಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ  ಹೈಕೋರ್ಟ್ ಗಳ 170 ನ್ಯಾಯಾಧೀಶರ ನೇಮಕಾತಿಯನ್ನು ಸರ್ಕಾರ ಬಾಕಿ ಇರಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮಾಹಿತಿ ನೀಡಲಾಗಿದ್ದು, ಸಾಧ್ಯವಾದಷ್ಟೂ ತ್ವರಿತಗತಿಯಲ್ಲಿ ನ್ಯಾಯಾಧೀಶರ ನೇಮಕಕ್ಕೆ ಮನವಿ ಮಾಡಲಾಗಿದೆ ಎಂದು ಟಿಎಸ್ ಠಾಕೂರ್ ಹೇಳಿದ್ದಾರೆ. ಹೈಕೋರ್ಟ್ ಗಳಲ್ಲಿ ತಕ್ಷಣವೇ ಭರ್ತಿಯಾಗಬೇಕಿರುವ 450 ಹುದ್ದೆಗಳು ಖಾಲಿ ಇವೆ. 1987 ರ ಭಾರತಿಯ ಕಾನೂನು ಆಯೋಗದ ವರದಿಯ ಪ್ರಕಾರ ಬಾಕಿ ಇದ್ದ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಇತ್ಯರ್ಥಗೊಳಿಸಲು 44 ಸಾವಿರ ನ್ಯಾಯಾಧೀಶರ ನೇಮಕವಾಗಬೇಕಿತ್ತು. ಆದರೆ ಈಗ ದೇಶದಲ್ಲಿ ಕೇವಲ 18 ಸಾವಿರ ನ್ಯಾಯಾಧೀಶರಿದ್ದು ಈಗ 70 ಸಾವಿರ ನ್ಯಾಯಾಧೀಶರ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT