ದೆಹಲಿ ಪೊಲೀಸರು 
ದೇಶ

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ದೆಹಲಿ ಪೊಲೀಸರ ಬೇಜವಾಬ್ದಾರಿತನದ ಅನುಭವ: ಪಿಐಎಲ್ ದಾಖಲು

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ದೆಹಲಿ ಪೊಲೀಸರ ಬೇಜವಾಬ್ದಾರಿತನದ ಅನುಭವ: ಪಿಐಎಲ್ ದಾಖಲು

ನವದೆಹಲಿ: ಪೊಲೀಸರಿಗೆ ಕರೆ ಮಾಡಿದರೂ ಅವರಿಂದ ಪ್ರತಿಕ್ರಿಯೆ ಬಾರದ ಘಟನೆಗಳು ದೆಹಲಿಯ ಸಾಮಾನ್ಯ ಜನರಿಗೆ ಅದೆಷ್ಟು ಬಾರಿ ಅನುಭವಕ್ಕೆ ಬಂದಿವೆಯೋ? ದೆಹಲಿ ಪೊಲೀಸರ ಬೇಜವಾಬ್ದಾರಿತನ ಈಗ ದೆಹಲಿ ನ್ಯಾಯಯಮೂರ್ತಿಗಳಿಗೂ ಅನುಭವಕ್ಕೆ ಬಂದಿದೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ವಸಂತ್ ಕುಂಜ್ ಗೆ ತೆರಳುತ್ತಿದ್ದ ದೆಹಲಿಯ ಹೈಕೋರ್ಟ್ ನ್ಯಾ. ವಿಪಿನ್ ಸಂಘಿ ವಾಹನ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದರು.ಆದರೆ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರ್ಯಾರೂ ಇಲ್ಲದಿದ್ದನ್ನು ಗಮನಿಸಿದ ನ್ಯಾ. ವಿಪಿನ್ ಸಂಘಿ, ತಕ್ಷಣವೇ 100 ಗೆ ಕರೆ ಮಾಡಿದ್ದಾರೆ. ಆದರೆ ಯಾರೊಬ್ಬರೂ ಅವರ ಕರೆಗೆ ಪ್ರತಿಕ್ರಿಯೆ ನೀಡಲಿಲ್ಲ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ನ್ಯಾ. ವಿಪಿನ್ ಸಂಘಿ, ದೆಹಲಿ ಪೊಲೀಸರ ಬೇಜವಾಬ್ದಾರಿತನದ ಬಗ್ಗೆ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಮಾಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ ವಾಹನ ದಟ್ಟಣೆ ತೆರವಾದ ನಂತರವೂ ಪೊಲೀಸ್ ಠಾಣೆಗೆ ಹಲವು ಬಾರಿ ಕರೆ ಮಾಡಲಾದರೂ ಯಾರೊಬ್ಬರೂ ಪ್ರತಿಕ್ರಿಯೆ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ದೆಹಲಿ ಪೊಲೀಸರ ಬೇಜವಾಬ್ದಾರಿತನದ ಬಗ್ಗೆ ವಿಪಿನ್ ಸಂಘಿ ದೆಹಲಿ ಹೈಕೋರ್ಟ್ ನ ಮುಖ್ಯ ನ್ಯಾ.ಜಿ ರೋಹಿತಿ ಅವರಿಗೂ ಪತ್ರ ಬರೆದಿದ್ದು ತಮ್ಮ ಪತ್ರವನ್ನು ಪಿಐಎಲ್ ಎಂದು ಪರಿಗಣಿಸಿ ವಿಚಾರಣೆ ನಡೆಸುವಂತೆ ಕೋರಿದ್ದಾರೆ. ಸುಮೋಟೊ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುವುದಾಗಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT