ಹಂದ್ವಾರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ (ಸಂಗ್ರಹ ಚಿತ್ರ) 
ದೇಶ

ಉಗ್ರರೊಂದಿಗೆ ಗುಂಡಿನ ಕಾಳಗ: ಓರ್ವ ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ಉಗ್ರರು ಬುಧವಾರ ಬೆಳಗ್ಗೆ ಓರ್ವ ಭಾರತೀಯ ಯೋಧನನ್ನು ಹತ್ಯೆಗೈದಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ಉಗ್ರರು ಬುಧವಾರ ಬೆಳಗ್ಗೆ ಓರ್ವ ಭಾರತೀಯ ಯೋಧನನ್ನು ಹತ್ಯೆಗೈದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಯೋಧರು ದಿಢೀರ್ ಕಾರ್ಯಾಚರಣೆ ನಡೆಸಿ, ಉಗ್ರರ ಮೇಲೆ ದಾಳಿ  ಮಾಡಿದರು. ಈ ವೇಳೆ ಉಗ್ರಗಾಮಿಗಳು ಹಾಗೂ ಯೋಧರ ನಡುವೆ ತೀವ್ರ ಗುಂಡಿನ ಕಾಳಗೆ ನಡೆದಿದ್ದು, ಘಟನೆಯಲ್ಲಿ ಓರ್ವ ಯೋಧ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕುಪ್ವಾರ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಭಾರತೀಯ ಯೋಧರು ಮಂಗಳವಾರ ತಡರಾತ್ರಿಯಿಂದಲೇ ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದರು.  ಅರಣ್ಯ ಪ್ರದೇಶದಲ್ಲಿ ಉಗ್ರ ಗಾಮಿಗಳ ಜಾಡನ್ನು ಹಿಡಿದ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾನೆ. ಕಾರ್ಯಚರಣೆ  ಮುಂದುವರೆದಿದ್ದು, ಈಗಾಗಲೇ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಉಗ್ರರ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಓರ್ವ  ಯೋಧನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮತ್ತಿಬ್ಬರು ಗಾಯಾಳು ಯೋಧರನ್ನು ಏರ್ ಲಿಫ್ಟ್ ಕಾರ್ಯಾಚರಣೆ ಮೂಲಕವಾಗಿ ಬಾದಾಮಿ ಬಾಗ್ ಕಂಟೋನ್ಮೆಂಟ್ ನಲ್ಲಿರುವ ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT