ತೃಪ್ತಿ ದೇಸಾಯಿ 
ದೇಶ

ಜೂನ್ ನಂತರ ತೃಪ್ತಿ ದೇಸಾಯಿ- ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಭೇಟಿ ಸಾಧ್ಯತೆ

ಭೂಮಾತಾ ಬ್ರಿಗೇಡ್ ನ ಅಧ್ಯಕ್ಷೆ ತೃಪ್ತಿ ದೇಸಾಯಿ ಅವರನ್ನು ಭೇಟಿ ಮಾಡಲು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಒಪ್ಪಿಗೆ ಸೂಚಿಸಿದ್ದಾರೆ.

ಪುಣೆ: ಭೂಮಾತಾ ಬ್ರಿಗೇಡ್ ನ ಅಧ್ಯಕ್ಷೆ ತೃಪ್ತಿ ದೇಸಾಯಿ ಅವರನ್ನು ಭೇಟಿ ಮಾಡಲು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಒಪ್ಪಿಗೆ ಸೂಚಿಸಿದ್ದಾರೆ.
ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ದೇವಾಲಯಗಳಲ್ಲಿ ಪ್ರವೇಶ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ತೃಪ್ತಿ ದೇಸಾಯಿ, ಆರ್ ಎಸ್ಎಸ್ ನಲ್ಲೂ ಮಹಿಳೆಯರಿಗೆ ಸದಸ್ಯತ್ವ ಪಡೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ, ಈ ವಿಷಯದ ಕುರಿತು ಚರ್ಚೆ ನಡೆಸಲು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಭೇಟಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದರು.
ತೃಪ್ತಿ ದೇಸಾಯಿಯವರನ್ನು ಭೇಟಿ ಮಾಡಲು ಮೋಹನ್ ಭಾಗವತ್ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಪ್ರಸ್ತುತ ಆರ್ ಎಸ್ ಎಸ್ ನ ವಿವಿಧ ಕ್ಯಾಂಪ್ ಗಳಲ್ಲಿ ಕಾರ್ಯನಿರತರಾಗಿರುವುದರಿಂದ ಜೂನ್ ನಂತರ ತೃಪ್ತಿ ದೇಸಾಯಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಸಂವಹನ ವಿಭಾಗದ ಮುಖ್ಯಸ್ಥ ಅನಿರುದ್ಧ್ ದೇಶಪಾಂಡೆ ತಿಳಿಸಿದ್ದಾರೆ.  
ಮಹಿಳೆಯರಿಗೆ ದೇವಾಲಯ ಪ್ರವೇಶ ಹಾಗೂ ಆರ್ ಎಸ್ ಎಸ್ ನಲ್ಲಿ ಸಕ್ರಿಯವಾಗಿರುವ ಅವಕಾಶ ನೀಡುವ ಬೇಡಿಕೆಗಳ ಬಗ್ಗೆ ಆರ್ ಎಸ್ ಎಸ್ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ ಎಂದು ತೃಪ್ತಿ ದೇಸಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Navigation systems' ಸ್ಥಗಿತಗೊಳಿಸಿ ನಿಷೇಧಿತ ಮಾರ್ಗದಲ್ಲಿ ಸಂಚರಿಸಿದ್ದರು', ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿದ್ದರು: UAE ಹಡಗುಗಳ ಮೇಲಿನ ದಾಳಿಗೆ Iran ಸಮರ್ಥನೆ..!

ಅಮೆರಿಕ ದಾಳಿಗೆ Iran ಪ್ರತೀಕಾರ; Hormuzನಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿಗಳ ಸುರಿಮಳೆ; ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ

ತಿರುಪತಿಯನ್ನು ರಾಜಕೀಯ ಅಖಾಡವಾಗಿಸಬೇಡಿ, ಆ ಹಕ್ಕು ಕೇವಲ ಮೈಸೂರು ಮಹಾರಾಜರಿಗೆ ಮಾತ್ರ: ಡಿಕೆ ಶಿವಕುಮಾರ್ ‘ಆರತಿ’ ಪ್ರಸ್ತಾವನೆಗೆ TTD ಗರಂ..!

ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿಗೆ ಮಹತ್ವದ ಘೋಷಣೆಗಳ ನಿರೀಕ್ಷೆ..!

BJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!