ತೃಪ್ತಿ ದೇಸಾಯಿ 
ದೇಶ

ಜೂನ್ ನಂತರ ತೃಪ್ತಿ ದೇಸಾಯಿ- ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಭೇಟಿ ಸಾಧ್ಯತೆ

ಭೂಮಾತಾ ಬ್ರಿಗೇಡ್ ನ ಅಧ್ಯಕ್ಷೆ ತೃಪ್ತಿ ದೇಸಾಯಿ ಅವರನ್ನು ಭೇಟಿ ಮಾಡಲು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಒಪ್ಪಿಗೆ ಸೂಚಿಸಿದ್ದಾರೆ.

ಪುಣೆ: ಭೂಮಾತಾ ಬ್ರಿಗೇಡ್ ನ ಅಧ್ಯಕ್ಷೆ ತೃಪ್ತಿ ದೇಸಾಯಿ ಅವರನ್ನು ಭೇಟಿ ಮಾಡಲು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಒಪ್ಪಿಗೆ ಸೂಚಿಸಿದ್ದಾರೆ.
ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ದೇವಾಲಯಗಳಲ್ಲಿ ಪ್ರವೇಶ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ತೃಪ್ತಿ ದೇಸಾಯಿ, ಆರ್ ಎಸ್ಎಸ್ ನಲ್ಲೂ ಮಹಿಳೆಯರಿಗೆ ಸದಸ್ಯತ್ವ ಪಡೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ, ಈ ವಿಷಯದ ಕುರಿತು ಚರ್ಚೆ ನಡೆಸಲು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಭೇಟಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದರು.
ತೃಪ್ತಿ ದೇಸಾಯಿಯವರನ್ನು ಭೇಟಿ ಮಾಡಲು ಮೋಹನ್ ಭಾಗವತ್ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಪ್ರಸ್ತುತ ಆರ್ ಎಸ್ ಎಸ್ ನ ವಿವಿಧ ಕ್ಯಾಂಪ್ ಗಳಲ್ಲಿ ಕಾರ್ಯನಿರತರಾಗಿರುವುದರಿಂದ ಜೂನ್ ನಂತರ ತೃಪ್ತಿ ದೇಸಾಯಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಸಂವಹನ ವಿಭಾಗದ ಮುಖ್ಯಸ್ಥ ಅನಿರುದ್ಧ್ ದೇಶಪಾಂಡೆ ತಿಳಿಸಿದ್ದಾರೆ.  
ಮಹಿಳೆಯರಿಗೆ ದೇವಾಲಯ ಪ್ರವೇಶ ಹಾಗೂ ಆರ್ ಎಸ್ ಎಸ್ ನಲ್ಲಿ ಸಕ್ರಿಯವಾಗಿರುವ ಅವಕಾಶ ನೀಡುವ ಬೇಡಿಕೆಗಳ ಬಗ್ಗೆ ಆರ್ ಎಸ್ ಎಸ್ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ ಎಂದು ತೃಪ್ತಿ ದೇಸಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT