ಬ್ಯಾಂಕರ್ ಗಳ ಮುಷ್ಕರ (ಸಂಗ್ರಹ ಚಿತ್ರ) 
ದೇಶ

ಸರ್ಕಾರದ ನೀತಿ, ನಿಷ್ಕ್ರಿಯತೆ ಖಂಡಿಸಿ ಜು.29 ರಿಂದ ಬ್ಯಾಂಕರ್ ಗಳ ಮುಷ್ಕರ

ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಕೆಲವೊಂದು ವಿಷಯದಲ್ಲಿ ನಿಷ್ಕ್ರಿಯತೆಯನ್ನು ಖಂಡಿಸಿ 10 ಲಕ್ಷ ಬ್ಯಾಂಕರ್ ಗಳು ಜುಲೈ.29 ರಿಂದ ಮುಷ್ಕರ

ಚೆನ್ನೈ: ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಕೆಲವೊಂದು ವಿಷಯದಲ್ಲಿ ನಿಷ್ಕ್ರಿಯತೆಯನ್ನು ಖಂಡಿಸಿ 10 ಲಕ್ಷ ಬ್ಯಾಂಕರ್ ಗಳು ಜುಲೈ.29 ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಖಿಲ ಭಾರತೀಯ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿಹೆಚ್ ವೆಂಕಟಾಚಾಲಂ ತಿಳಿಸಿದ್ದಾರೆ. ಬ್ಯಾಂಕಿಂಗ್ ಸೆಕ್ಟರ್ ನ ಬ್ಯಾಡ್ ಲೋನ್‌ 10 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇದರಲ್ಲಿ ಅತಿ ಹೆಚ್ಚು ಬಾಕಿ ಉಳಿಸಿಕೊಂಡಿರುವುದು ಕಾರ್ಪೊರೇಟ್ ವಲಯದವರೇ ಆಗಿದ್ದು, ಬಾಕಿ ಇರುವ ಹಣ ವಸೂಲಿ ಮಾಡಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವೆಂಕಟಾಚಲಂ ಹೇಳಿದ್ದಾರೆ. 
ಬ್ಯಾಂಕ್ ಗಳ ಆದಾಯದಲ್ಲಿ ಬ್ಯಾಡ್ ಲೋನ್ ಗಳನ್ನು ನೀಡಲಾಗುತ್ತಿದೆ ಅಥವಾ ವಜಾಗೊಳಿಸಲಾಗುತ್ತಿದೆ ಪರಿಣಾಮವಾಗಿ ನಷ್ಟ ಉಂಟಾಗುತ್ತಿದೆ ಎಂದಿರುವ ಸಿಹೆಚ್ ವೆಂಕಟಾಚಲಂ, ಸುಸ್ತಿದಾರರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. 7 ,000 ಉದ್ದೇಶಿತ ಸುಸ್ತಿದಾರರಿದ್ದು ಇವರಿಂದ 60 ,000 ಕೋಟಿ ಬಾಕಿ ಹಣ ವಸೂಲಿ ಆಗಬೇಕಿದೆ ಎಂದು ವೆಂಕಟಾಚಲಂ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT