ಟೈರ್ ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು 
ದೇಶ

ಕಲಬುರ್ಗಿಯಲ್ಲಿ ಬಸವಣ್ಣ ಪ್ರತಿಮೆಗೆ ಹಾನಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಕಲಬುರ್ಗಿಯಲ್ಲಿರುವ ಬಸವಣ್ಣನ ಪ್ರತಿಮೆ ಮೇಲೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಹಿನ್ನಲೆಯಲ್ಲಿ ಕೆಲ ಸಂಘಟನೆಗಳು...

ಕಲಬುರ್ಗಿ: ಕಲಬುರ್ಗಿಯಲ್ಲಿರುವ ಬಸವಣ್ಣನ ಪ್ರತಿಮೆ ಮೇಲೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಹಿನ್ನಲೆಯಲ್ಲಿ ಕೆಲ ಸಂಘಟನೆಗಳು ಕೈಗೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. 
ಮಂಗಳವಾರ ರಾತ್ರಿ ಕಲಬುರ್ಗಿಯ ಅಫ್ಜಲ್ ಪುರ್ ತಾಲ್ಲೂಕಿನ ಅಲ್ಲಗಿ ಹಳ್ಳಿಯಲ್ಲಿದ್ದ ಬಸವಣ್ಣ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇದನ್ನು ವಿರೋಧಿಸಿ ಕೆಲ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಟೈರ್ ಗಳನ್ನು ಸುಟ್ಟು ಹಾಕಿ, ಆಟೋ ರಿಕ್ಷಾದವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. 
ಇನ್ನು ಸ್ಥಳೀಯರು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಮೆ ಮುಂದೆ ಧರಣಿ ನಡೆಸಿದರು. ಅಫ್ಜಲ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಖಿಲ ಭಾರತ ಲೀಂಗಾಯತ ವೀರಶೈವ ಮಹಾಸಭಾ, ಬಸವ ಜಯಂತಿ ಉತ್ಸವ ಸಮಿತಿ ಮತ್ತು ಬಸವ ಪ್ರತಿಷ್ಠಾನ ಸೇರಿದಂತೆ ಇತರೆ ಸಂಘಗಳು ಜಂಟಿಯಾಗಿ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ. ಪ್ರಕರಣ ಕುರಿತು ತನಿಖೆಯನ್ನು ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT