ಟೈರ್ ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು 
ದೇಶ

ಕಲಬುರ್ಗಿಯಲ್ಲಿ ಬಸವಣ್ಣ ಪ್ರತಿಮೆಗೆ ಹಾನಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಕಲಬುರ್ಗಿಯಲ್ಲಿರುವ ಬಸವಣ್ಣನ ಪ್ರತಿಮೆ ಮೇಲೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಹಿನ್ನಲೆಯಲ್ಲಿ ಕೆಲ ಸಂಘಟನೆಗಳು...

ಕಲಬುರ್ಗಿ: ಕಲಬುರ್ಗಿಯಲ್ಲಿರುವ ಬಸವಣ್ಣನ ಪ್ರತಿಮೆ ಮೇಲೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಹಿನ್ನಲೆಯಲ್ಲಿ ಕೆಲ ಸಂಘಟನೆಗಳು ಕೈಗೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. 
ಮಂಗಳವಾರ ರಾತ್ರಿ ಕಲಬುರ್ಗಿಯ ಅಫ್ಜಲ್ ಪುರ್ ತಾಲ್ಲೂಕಿನ ಅಲ್ಲಗಿ ಹಳ್ಳಿಯಲ್ಲಿದ್ದ ಬಸವಣ್ಣ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇದನ್ನು ವಿರೋಧಿಸಿ ಕೆಲ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಟೈರ್ ಗಳನ್ನು ಸುಟ್ಟು ಹಾಕಿ, ಆಟೋ ರಿಕ್ಷಾದವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. 
ಇನ್ನು ಸ್ಥಳೀಯರು ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಮೆ ಮುಂದೆ ಧರಣಿ ನಡೆಸಿದರು. ಅಫ್ಜಲ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಖಿಲ ಭಾರತ ಲೀಂಗಾಯತ ವೀರಶೈವ ಮಹಾಸಭಾ, ಬಸವ ಜಯಂತಿ ಉತ್ಸವ ಸಮಿತಿ ಮತ್ತು ಬಸವ ಪ್ರತಿಷ್ಠಾನ ಸೇರಿದಂತೆ ಇತರೆ ಸಂಘಗಳು ಜಂಟಿಯಾಗಿ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ. ಪ್ರಕರಣ ಕುರಿತು ತನಿಖೆಯನ್ನು ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ