ತೃಪ್ತಿ ದೇಸಾಯಿ 
ದೇಶ

ದರ್ಗಾ ಪ್ರವೇಶಿಸಿದ ತೃಪ್ತಿ ದೇಸಾಯಿ, ಮಹಿಳೆಯರಿಗೆ ನಿಷೇಧ ಹೇರಿದ್ರೆ ಪ್ರತಿಭಟನೆಯ ಎಚ್ಚರಿಕೆ

ಅಹಮ್ಮದನಗರದ ಶನಿ ಶಿಂಗ್ನಾಪುರ ಹಾಗೂ ನಾಶಿಕ್ ನ ತ್ರೈಂಬಕೇಶ್ವರ ಶಿವ ದೇವಾಲಯಗಳಿಗೆ ಮಹಿಳಾ ಪ್ರವೇಶಾತಿ ಆಗ್ರಹಿಸಿ ಹೋರಾಟ ನಡೆಸಿ ಯಶಸ್ವಿಯಾಗಿದ್ದ...

ಮುಂಬೈ: ಅಹಮ್ಮದನಗರದ ಶನಿ ಶಿಂಗ್ನಾಪುರ ಹಾಗೂ ನಾಶಿಕ್ ನ ತ್ರೈಂಬಕೇಶ್ವರ ಶಿವ ದೇವಾಲಯಗಳಿಗೆ ಮಹಿಳಾ ಪ್ರವೇಶಾತಿಗೆ ಆಗ್ರಹಿಸಿ ಹೋರಾಟ ನಡೆಸಿ ಯಶಸ್ವಿಯಾಗಿದ್ದ ಭೂಮಾತಾ ಬ್ರಿಗೇಡ್ ಸಂಘಟನೆ ಮುಖ್ಯಸ್ಥೆ ತೃಪ್ತಿ ದೇಸಾಯಿ ಗುರುವಾರ ಮುಂಬೈನ ಹಜಿ ಅಲಿ ದರ್ಗಾ ಪ್ರವೇಶಿಸಿದ್ದಾರೆ.
ತೃಪ್ತಿ ದೇಸಾಯಿ ಇಂದು ಬೆಳಗ್ಗೆ ದರ್ಗಾ ಪ್ರವೇಶಿಸಿ ಪಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯರಿಗೆ ಪೊಲೀಸರು ಭದ್ರತೆ ನೀಡಿದ್ದರು. ಆದರೆ ಮಹಿಳೆಯರಿಗೆ ದರ್ಗಾದಲ್ಲಿನ ಮಝುರ್ ( ಗರ್ಭಗುಡಿ) ಪ್ರವೇಶವನ್ನು ನಿರಾಕರಿಸಲಾಯಿತು.
ದರ್ಗಾ ಪ್ರವೇಶಿಸಿದ ನಂತರ ಮಾತನಾಡಿದ ತೃಪ್ತಿ ದೇಸಾಯಿ, ಈ ಪ್ರವೇಶಾತಿಯಿಂದ ನಮಗೆ ಜಯ ದೊರಕಿದೆ. ಇನ್ನು ಹದಿನೈದು ದಿನಗಳೊಳಗೆ ಮಝುರ್ ಪ್ರವೇಶ ಕಾರ್ಯ ಕೈಗೊಳ್ಳಲಿದ್ದು, ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಬಹಿರಂಗವಾಗಿ ಸವಾಲು ಹಾಕಿದರು. ಅಲ್ಲದೆ ಒಂದು ವೇಳೆ ಮಝರ್ ಪ್ರವೇಶಕ್ಕೆ ನಿಷೇಧ ಹೇರಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಕಳೆದ ಏಪ್ರಿಲ್​ನಲ್ಲಿ ಭೂಮಾತಾ ಬ್ರಿಗೇಡ್ ಸಂಘಟನೆ ಮಹಿಳೆಯರು ದರ್ಗಾ ಪ್ರವೇಶಕ್ಕೆ ಮುಂದಾದಾಗ ಸ್ಥಳೀಯ ಮುಖಂಡರು ಇದನ್ನು ವಿರೋಧಿಸಿ, ಜೀವ ಬೆದರಿಕೆ ಹಾಕಿದ್ದರು. ಆದರೆ ಇದನ್ನು ಲೆಕ್ಕಿಸದೆ ಹಜ್ ಎಲ್ಲರ ಆಸ್ತಿ ಎಂಬ ಘೊಷಣೆಯೊಂದಿಗೆ ತೃಪ್ತಿ ಅವರು ಹೋರಾಟ ನಡೆಸಿದರು. ಈ ಕಾರ್ಯಕ್ಕೆ ಮುಸ್ಲಿಂ ಮಹಿಳೆಯರೂ ಕೂಡ ಕೈ ಜೋಡಿಸಿರುವುದು ಗಮನಾರ್ಹ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT