ಪಂಚ ವಾರ್ಷಿಕ ಯೋಜನೆ ಜಾರಿಗೆ ತಂದಿದ್ದ ಮಾಜಿ ಪ್ರಧಾನಿ ದಿವಂಗತ ಜವಹರಲಾಲ ನೆಹರೂ 
ದೇಶ

ಪಂಚವಾರ್ಷಿಕ ಯೋಜನೆಯ ಬದಲಿಗೆ 15 ವರ್ಷಗಳ ವಿಷನ್ ಡಾಕ್ಯುಮೆಂಟ್

ಯೋಜನಾ ಆಯೋಗವನ್ನು ನೀತಿ ಆಯೋಗವನ್ನಾಗಿ ಬದಲಾಯಿಸಿದ ನಂತರ ಮೋದಿ ನೇತೃತ್ವದ...

ನವದೆಹಲಿ: ಯೋಜನಾ ಆಯೋಗವನ್ನು ನೀತಿ ಆಯೋಗವನ್ನಾಗಿ ಬದಲಾಯಿಸಿದ ನಂತರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಂಚ ವಾರ್ಷಿಕ ಯೋಜನೆಯನ್ನು 15 ವರ್ಷಗಳ ವಿಷನ್ ಡಾಕ್ಯುಮೆಂಟ್(ದೂರದೃಷ್ಟಿ ಯೋಜನೆ) ಆಗಿ ಬದಲಿಸಲು ನಿರ್ಧರಿಸಿದೆ.

ಸುಸ್ಥಿರ ಬೆಳವಣಿಗೆಯ ಹಿಂದೆ ಸರಿಯದೆ ದೇಶದ ಸಾಮಾಜಿಕ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಹೊಸ ವಿಷನ್ ಡಾಕ್ಯುಮೆಂಟ್ ಗಳನ್ನು ತಯಾರಿಸಲಾಗುತ್ತದೆ. ನೀತಿ ಆಯೋಗಕ್ಕೆ ಈ ದಾಖಲೆಗಳನ್ನು ತಯಾರಿಸುವ ಕೆಲಸ ನಿರ್ವಹಿಸಲಾಗಿದೆ.

2012ರಿಂದ 2017ರವರೆಗಿನ 12ನೇ ಪಂಚ ವಾರ್ಷಿಕ ಯೋಜನೆ ಮುಂದಿನ ವರ್ಷ ಕೊನೆಗೊಂಡ ನಂತರ 15 ವರ್ಷಗಳ ವಿಷನ್ ಡಾಕ್ಯುಮೆಂಟ್ ಜಾರಿಗೆ ಬರಲಿದೆ. ರಾಷ್ಟ್ರೀಯ ಅಭಿವೃದ್ಧಿ ಅಜೆಂಡಾ ಹೆಸರಿನಲ್ಲಿ ಮುಂದಿನ ವರ್ಷದಿಂದ ಆರಂಭವಾಗಲಿದ್ದು, ಅದರಲ್ಲಿ ಆಂತರಿಕ ಭದ್ರತೆ ಮತ್ತು ರಕ್ಷಣಾ ಇಲಾಖೆ, ಯೋಜನೆಗಳು, ಕಾರ್ಯಕ್ರಮಗಳು, ದೀರ್ಘಾವಧಿಯ ಕಾರ್ಯಸೂಚಿಗಳು ಸೇರಿವೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಪರಾಮರ್ಶಿಸಲಾಗುವುದು.

ನಮ್ಮ ದೇಶದಲ್ಲಿ ಪಂಚ ವಾರ್ಷಿಕ ಯೋಜನೆಯನ್ನು 1951ರಲ್ಲಿ ಮಾಜಿ ಪ್ರಧಾನಿ ದಿವಂಗತ ಜವಹರಲಾಲ್ ನೆಹರೂರವರು ಜಾರಿಗೆ ತಂದಿದ್ದರು. ಆದರೆ ಇಂದು ದೇಶದ ಆರ್ಥಿಕ, ಸಾಮಾಜಿಕ ಅಗತ್ಯಗಳು, ಬೆಳವಣಿಗೆಗೆ ಅನುಗುಣವಾಗಿ ವಿಷನ್ ಡಾಕ್ಯುಮೆಂಟನ್ನು ಜಾರಿಗೆ ತರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT