ನೌಕಾ ಹಗರಣ (ಸಂಗ್ರಹ ಚಿತ್ರ) 
ದೇಶ

"ಅಗಸ್ಟಾ"ಗಿಂತ ದೊಡ್ಡ ಪ್ರಮಾಣದ ನೌಕಾ ಹಗರಣ ಬೆಳಕಿಗೆ

ಬಹುಕೋಟಿ ವಿವಿಐಪಿ ಚಾಪರ್ ಹಗರಣದಲ್ಲಿ ಕಾಂಗ್ರೆಸ್ ಮುಂಖಡರ ಹೆಸರು ಬಹಿರಂಗವಾಗಿ ಉಭಯ ಸದನಗಳ ಕಲಾಪಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿರುವಂತೆಯೇ ಯುಪಿಎ ಸರ್ಕಾರದ ಅವಧಿಯ ಮತ್ತೊಂದು ದೊಡ್ಡ ಹಗರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಬಹುಕೋಟಿ ವಿವಿಐಪಿ ಚಾಪರ್ ಹಗರಣದಲ್ಲಿ ಕಾಂಗ್ರೆಸ್ ಮುಂಖಡರ ಹೆಸರು ಬಹಿರಂಗವಾಗಿ ಉಭಯ ಸದನಗಳ ಕಲಾಪಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿರುವಂತೆಯೇ  ಯುಪಿಎ ಸರ್ಕಾರದ ಅವಧಿಯ ಮತ್ತೊಂದು ದೊಡ್ಡ ಹಗರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.

ಸುಮಾರು 3600 ಕೋಟಿ ಮೌಲ್ಯ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕಿಂತಲೂ ದೊಡ್ಡ ಮಟ್ಟದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣ ನೌಕಾ ಪಡೆಯಲ್ಲಿ ಕೇಳಿಬಂದಿದೆ. ಖಾಸಗಿ ಸುದ್ದಿವಾಹಿನಿ  ವರದಿ ಮಾಡಿರುವಂತೆ ಯುಪಿಎ ಅವಧಿಯಲ್ಲಿ ಕಳಪೆ ಗುಣಮಟ್ಟದ ಉಕ್ಕಿನಿಂದ ನೌಕಾಪಡೆ ಹಡಗುಗಳ ನಿರ್ಮಾಣಕ್ಕೆ ಸರ್ಕಾರ ಅವಕಾಶ ನೀಡಿರುವುದು ಇದೀಗ ಬಹಿರಂಗವಾಗಿದೆ. ಯುಪಿಎ  ಸರ್ಕಾರ 2009ರಲ್ಲಿ ಇಟಲಿಯ ಕಂಪನಿ ಫಿನ್‌ಕ್ಯಾಂಟರಿ ಜತೆಗೆ ಎರಡು ನೌಕಾ ಟ್ಯಾಂಕರ್ ಗಳ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಂಡಿತ್ತು.

ಆದರೆ ಈ ವೇಳೆ ಕಳಪೆ ಗುಣಮಟ್ಟದ ಸ್ಟೀಲ್‌ನಲ್ಲಿ ನೌಕಾ ಟ್ಯಾಂಕರ್ ತಯಾರಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ವಾಣಿಜ್ಯ ಬಳಕೆಗೆ ಉಪಯೋಗ ಮಾಡುವ ಕಳಪೆ ಗುಣಮಟ್ಟದ ಸ್ಟೀಲ್  ನಿಂದ ನೌಕೆ ತಯಾರಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಪೈಕಿ ಒಂದು ಟ್ಯಾಂಕರ್ ಕಾರವಾರ ನೌಕಾನೆಲೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಐಎನ್ ಎಸ್ ವಿಕ್ರಮಾಧಿತ್ಯ  ಯುದ್ಧನೌಕೆ ಮೂಲಕ ಈ ನೌಕೆಗಳನ್ನು ಭಾರತಕ್ಕೆ ರವಾನಿಸಲಾಗಿತ್ತು ಎಂದು ಹೇಳಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತನಿಖೆಗೆ ಆದೇಶಿಸಿದ್ದಾರೆ.

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ನೌಕಾ ಹಗರಣ ಕೂಡ ಬೆಳಕಿಗೆ ಬಂದಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT