ಮನೋರಮಾ ದೇವಿ 
ದೇಶ

ಕಾರು ಓವರ್​ಟೇಕ್ ಪ್ರಕರಣ: ಮೇ 20ಕ್ಕೆ ವಿಚಾರಣೆಗೆ ಹಾಜರಾಗುವಂತೆ ಮನೋರಮಾಗೆ ಕೋರ್ಟ್ ಸೂಚನೆ

ಕಾರು ಓವರ್​ಟೇಕ್ ಮಾಡಿದ್ದಕ್ಕೆ ಯುವಕನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡ ಜೆಡಿಯು ಎಂಎಲ್ ಸಿ...

ಪಾಟ್ನಾ: ಕಾರು ಓವರ್​ಟೇಕ್ ಮಾಡಿದ್ದಕ್ಕೆ ಯುವಕನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡ ಜೆಡಿಯು ಎಂಎಲ್ ಸಿ ಮನೋರಮಾ ದೇವಿಗೆ ಶನಿವಾರ ಗಯಾ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹತ್ಯೆ ಪ್ರಕರಣ ಸಂಬಂಧ ಮೇ 20ರಂದು ವಿಚಾರಣೆಗೆ ಹಾಜರಾಗುವಂತೆ ಮೋನರಮಾ ದೇವಿ ಹಾಗೂ ಆಕೆಯ ವಕೀಲರಿಗೆ ನೋಟಿಸ್ ನೀಡಿರುವ ಕೋರ್ಟ್, ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಬಿಹಾರ ವಿಧಾನ ಪರಿಷತ್ ಸದಸ್ಯೆ ಮನೋರಮಾ ದೇವಿ ಅವರ ಪುತ್ರ ರಾಕಿ ಯಾದವ್ ಅವರನ್ನು ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಪುತ್ರನ ಬಂಧನದ ನಂತರ ಮನೋರಮಾ ತಲೆಮರೆಸಿಕೊಂಡಿದ್ದಾರೆ. ಮನೋರಮಾ ದೇವಿ ಅಕ್ರಮ ಮದ್ಯ ತಯಾರಿಸಿದ ಆರೋಪ ಎದಿರುಸುತ್ತಿದ್ದಾರೆ.
ವ್ಯಾಪಾರಿಯೊಬ್ಬರ ಪುತ್ರ ಆದಿತ್ಯ ಸಚ್​ದೇವ್ ಹಾಗೂ ಸ್ನೆಹಿತರನ್ನು ಒಳಗೊಂಡ ಸ್ವಿಪ್ಟ್ ಕಾರು ಶಾಸಕಿಯ ಪುತ್ರ ರಾಕಿಯ ಎಸ್​ಯುವಿ ಕಾರನ್ನು ಓವರ್ ಟೇಕ್ ಮಾಡಿದ ಹಿನ್ನೆಲೆಯಲ್ಲಿ ಉಭಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಆವೇಶಕ್ಕೆ ಒಳಗಾದ ರಾಕಿ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಆದಿತ್ಯಾಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

ವಾರಕ್ಕೆ 70 ಗಂಟೆ 'ಜೀತ' ಸೂತ್ರ ಹೇಳಿಕೆ ಬೆನ್ನಲ್ಲೇ ಫ್ರಾನ್ಸ್‌ನಲ್ಲಿ ಇನ್ಫೋಸಿಸ್‌ಗೆ ₹1.9 ಕೋಟಿ ದಂಡ!

'1 ಲಕ್ಷ ರೂ ವ್ಯವಹಾರ ಮಾಡಿದ್ರೆ ಕೈಗೆ ಸಿಗೋದು 40 ಸಾವಿರ ಮಾತ್ರ'; Swiggy, Zomatoಗೆ ಶಾಕ್ ಕೊಟ್ಟ ಬೆಂಗಳೂರು ಹೊಟೆಲ್'ಗಳು, ಆ.15ರಿಂದ ಬಹಿಷ್ಕಾರ!

"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್, ರಾಹುಲ್ ಗಾಂಧಿ ವಿರುದ್ಧ ಕಿಡಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!