ಕನ್ಹಯ್ಯ ಕುಮಾರ್ ವಿವಾದದ ಲಾಭ ಪಡೆದು ವಿಧ್ವಂಸಕ ಕೃತ್ಯ ನಡೆಸಲು ಇಲ್ಲಿನ ಉಗ್ರರಿಗೆ ನಿರ್ದೇಶನ ನೀಡಿದ್ದ ಇಸೀಸ್! 
ದೇಶ

ಕನ್ಹಯ್ಯ ಕುಮಾರ್ ವಿವಾದದ ಲಾಭ ಪಡೆದು ವಿಧ್ವಂಸಕ ಕೃತ್ಯ ನಡೆಸಲು ಇಲ್ಲಿನ ಉಗ್ರರಿಗೆ ನಿರ್ದೇಶನ ನೀಡಿದ್ದ ಇಸೀಸ್!

ಭಾರತದಲ್ಲಿ ನಡೆಯುತ್ತಿರುವ ಪ್ರತಿಯೊಂದು ಬೆಳವಣಿಗೆಯನ್ನು ಇಸೀಸ್ ಉಗ್ರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇಲ್ಲಿದೆ.

ನವದೆಹಲಿ: ಭಾರತದಲ್ಲಿ ನಡೆಯುತ್ತಿರುವ ಪ್ರತಿಯೊಂದು ಬೆಳವಣಿಗೆಯನ್ನು ಇಸೀಸ್ ಉಗ್ರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಇಲ್ಲಿದೆ. ರಾಷ್ಟ್ರೀಯತೆ ವಿಚಾರವಾಗಿ ಜೆಎನ್ ಯು ವಿವಿಯಲ್ಲಿ ಉಂಟಾಗಿದ್ದ ವಿವಾದ ಹಾಗೂ ಜೆಎನ್ ಯು ವಿವಿಯ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ವಿರುದ್ಧ ಕೇಳಿಬಂದಿದ್ದ ದೇಶವಿರೋಧಿ ಘೋಷಣೆ ಕೂಗಿದ್ದ ಆರೋಪ ಪ್ರಕರಣದ ಲಾಭ ಪಡೆಯುವಂತೆ ಇಸೀಸ್ ಉಗ್ರರು ಭಾರತದಲ್ಲಿ ನೇಮಕ ಮಾಡಿಕೊಂಡಿದ್ದ ಉಗ್ರರಿಗೆ ಸೂಚನೆ ನೀಡಿದ್ದರು ಎಂಬ ಸ್ಫೋಟಕ ಮಾಹಿತಿ ಈಗ ಬಹಿರಂಗವಾಗಿದೆ.

ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿರುವ ವರದಿಯ ಪ್ರಕಾರ,  ದೇಶವಿರೋಧಿ ಘೋಷಣೆ ಪ್ರಕರಣ ಹಾಗೂ ಕನ್ಹಯ್ಯ ಕುಮಾರ್ ಬಂಧನವನ್ನು ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಸೇರಿಕೊಂಡು ವಾಹನಗಳಿಗೆ ಬೆಂಕಿ ಹಚ್ಚುವುದು ಸೇರಿದಂತೆ ಹಲವು ವಿಧ್ವಂಸಕ ಕೃತ ನಡೆಸಲು ಇಸೀಸ್ ನ ಅಹ್ಮದ್ ಅಲಿ 19 ವರ್ಷದ ಆಶಿಕ್ ಅಹ್ಮದ್ ಅಲಿಯಾಸ್ ಪಶ್ಚಿಮ ಬಂಗಾಳದ ಹೂಗ್ಲಿಯ ರಾಜಾ ಎಂಬುವವನಿಗೆ ನಿರ್ದೇಶನ ನೀಡಿದ್ದ.

ಭಾರತದಲ್ಲಿ ಇಸೀಸ್ ಉಗ್ರ ಸಂಘಟನೆ ಪರವಾಗಿ ಕಾರ್ಯನಿರ್ವಹಿಸಲು ನೇಮಕಗೊಂಡಿದ್ದ ಮೂವರು ಉಗ್ರರ ವಿಚಾರಣೆ ವೇಳೆ ಈ ಸ್ಫೋಟಕ ಮಾಹಿತಿ ಹೊರಬಂದಿದೆ. ಕನ್ಹಯ್ಯ ಕುಮಾರ್ ವಿವಾದದಲ್ಲಿ ಸೇರಿಕೊಂಡು ವಿದ್ಯಾರ್ಥಿಗಳ ಮೂಲಕವೇ ದೇಶದಲ್ಲಿ ಮತ್ತಷ್ಟು ಅಸ್ಥಿರತೆ ಉಂಟು ಮಾಡುವುದು ಇಸೀಸ್ ನ ಉದ್ದೇಶವಾಗಿತ್ತು ಎಂದು ಎನ್ಐಎ ತಿಳಿಸಿದೆ. ಈ ಬಗ್ಗೆ ಉಗ್ರರು ನೀಡಿರುವ ಹೇಳಿಕೆ ಪ್ರತಿಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟ ಮಾಡಿದ್ದು ಇದೆ ಮೊದಲ ಬಾರಿಗೆ ಇಸೀಸ್ ಬಗ್ಗೆ ಭಾರತೀಯ ಉಗ್ರರಿಂದ ತನಿಖಾ ಸಂಸ್ಥೆಯೊಂದು ಹೇಳಿಕೆ ದಾಖಲಿಸಿಕೊಂಡಿದೆ.

ಇತ್ತೀಚೆಗಷ್ಟೇ ಅಮೆರಿಕ ನಡೆಸಿದ ನಡೆಸಿದ ವಾಯುದಾಳಿಯಲ್ಲಿ ಮೃತಪಟ್ಟಿದ್ದ ಶಫಿ ಅರ್ಮಾರ್ ವಿದ್ಯಾರ್ಥಿ ಚಳುವಳಿಯ ಲಾಭ ಪಡೆದು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಭಾರತೀಯ ಉಗ್ರರಿಗೆ ನಿರ್ದೇಶನ ನೀಡಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT