ಸೇನೆಯಲ್ಲಿ ದಂಗೆ ಕುರಿತು ವದಂತಿ: ವರದಿಯನ್ನು ನಿರಾಕರಿಸಿದ ಸೇನಾ ಅಧಿಕಾರಿಗಳು 
ದೇಶ

ಸೇನೆಯಲ್ಲಿ ದಂಗೆ ಕುರಿತು ವದಂತಿ: ವರದಿಯನ್ನು ನಿರಾಕರಿಸಿದ ಸೇನಾ ಅಧಿಕಾರಿಗಳು

ಭಾರತೀಯ ಸೇನೆಯಲ್ಲಿರುವ ಪದಾತಿದಳದ ಯೋಧರು ದಂಗೆ ಎದ್ದಿದ್ದಾರಾ? ಹೀಗೊಂದು ವದಂತಿ ಹಬ್ಬಿದೆ.

ನವದೆಹಲಿ: ಭಾರತೀಯ ಸೇನೆಯಲ್ಲಿರುವ ಪದಾತಿದಳದ ಯೋಧರು ದಂಗೆ ಎದ್ದಿದ್ದಾರಾ? ಹೀಗೊಂದು ವದಂತಿ ಹಬ್ಬಿದೆ. ಆದರೆ ಸೇನಾ ಅಧಿಕಾರಿಗಳು ಈ ಕುರಿತ ವರದಿಯನ್ನು ಸಾರ ಸಗಟಾಗಿ ತಿರಸ್ಕರಿಸಿದ್ದಾರೆ.

ಈಶಾನ್ಯ ಭಾಗದಲ್ಲಿ ಯೋಧನೊಬ್ಬನ ಸಾವಿನ ಪ್ರಕರಣದ ನಂತರ ಯೋಧರು ಪ್ರತಿಭಟನೆಯನ್ನು ಪ್ರಾರಂಭಿಸಿದ್ದು ಸೈನಿಕರು ಮತ್ತು ಅಧಿಕಾರಿಗಳ ನಡುವೆ ಮಾರಾಮಾರಿಯೂ ನಡೆದಿದೆ ಎಂಬ ವರದಿ ಪ್ರಕಟವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಭಾವುಕರಾದ ಯೋಧರು ಮನನೊಂದು ಪ್ರತಿಭಟನೆ ನಡೆಸುತ್ತಿದ್ದಾರೆ ಇದು ದಂಗೆ ಅಲ್ಲ ಎಂದು ಹೇಳಿದ್ದಾರೆ.

ರೂಟ್ ಮಾರ್ಚ್ ನಡೆಯುವುದಕ್ಕೂ ಮುನ್ನ ಯೋಧರೊಬ್ಬರು ಎದೆ ನೋವು ಎದುರಿಸುತ್ತಿರುವುದರ ಬಗ್ಗೆ ಹೇಳಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದ ವೈದ್ಯರು  ಎದೆ ನೋವು ಎಂದು ಹೇಳಿದ್ದ ಯೋಧರ ಆರೋಗ್ಯ ಸರಿಯಾಗಿದ್ದು, ರೂಟ್ ಮಾರ್ಚ್ ಗೆ ಹೋಗಬಹುದು ಎಂದು ಹೇಳಿದ್ದರು. ಆದರೆ ತರಬೇತಿ ನಡುವೆಯೇ ಕುಸಿದು ಬಿದ್ದು ಆ ಯೋಧ ಸಾವನ್ನಪ್ಪಿದ್ದರು. ಈ ಪ್ರಕರಣದಿಂದ ಯೋಧರು ಮನನೊಂದಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಅಧಿಕಾರಿಗಳು, ಯೋಧರ ನಡುವೆ ಸಣ್ಣ ಘರ್ಷಣೆ ನಡೆದಿದ್ದರೂ ಅದರಲ್ಲಿ ಯಾರೂ ತೀವ್ರವಾಗಿ ಗಾಯಗೊಂಡಿಲ್ಲ. ಯೋಧನ ಸಾವಿನ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT