ನಿತಿಶ್ ಕುಮಾರ್ 
ದೇಶ

ಬಿಹಾರ ಪತ್ರಕರ್ತನ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ನಿತಿಶ್ ಕುಮಾರ್ ನಿರ್ಧಾರ

ಪ್ರತಿಪಕ್ಷಗಳ ವಾಗ್ದಾಳಿಯ ಹಿನ್ನೆಲೆಯಲ್ಲಿ ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ...

ನವದೆಹಲಿ: ಪ್ರತಿಪಕ್ಷಗಳ ವಾಗ್ದಾಳಿಯ ಹಿನ್ನೆಲೆಯಲ್ಲಿ ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಸೋಮವಾರ ಘೋಷಿಸಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಿತಿಶ್ ಕುಮಾರ್ ಅವರು, ಸಿವಾನ್ ಜಿಲ್ಲೆಯ ಪತ್ರಕರ್ತನ ಹತ್ಯೆಯನ್ನು ಖಂಡಿಸಿದರು. ಅಲ್ಲದೆ ಪತ್ರಕರ್ತರ ಮೇಲೆ ದಾಳಿ ಮಾಡುವುದು ನನ್ನ ಮೇಲೆ ದಾಳಿ ಮಾಡಿದಂತೆ ಎಂದರು.
'ಯಾವುದೇ ಪತ್ರಕರ್ತನ ಮೇಲಿನ ದಾಳಿಯನ್ನು ನಾವು ಸರ್ಕಾರದ ಮೇಲೆ ನಡೆದ ದಾಳಿ ಅಂತ ಭಾವಿಸುತ್ತೇವೆ. ರಾಜ್ಯ ಪೊಲೀಸರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಆದರೆ ರಾಜದೇವ್ ರಂಜನ್ ಅವರ ಕುಟುಂಬದ ಮನವಿ ಮೇರೆಗೆ ಪ್ರಕರಣವನ್ನು ನಾವು ಸಿಬಿಐಗೆ ವಹಿಸಲು ನಿರ್ಧರಿಸಿದ್ದೇವೆ' ಎಂದರು.
ಕಳೆದ ಶುಕ್ರವಾರ ಸಂಜೆ ದುಷ್ಕರ್ಮಿಗಳು ರಂಜನ್ ಅವರ ಮೇಲೆ ಗುಂಡುಹಾರಿಸಿ ಹತ್ಯೆ ಮಾಡಿದ್ದರು. ಘಟನೆ ಕುರಿತು ತನಿಖೆ ಆರಂಭಿಸಿದ್ದ ಬಿಹಾರ ಪೊಲೀಸರು ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT