ದೇಶ

2019 ಕ್ಕೆ ಬಿಜೆಪಿ ವಿರುದ್ಧ ಮಹಾಮೈತ್ರಿಗೆ ಕರೆ ನೀಡಿದ ಎಡಪಕ್ಷ

Srinivas Rao BV

ಹೈದರಾಬಾದ್: 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ದೂರವಿಡುವುದಕ್ಕೆ ಬಿಜೆಪಿಯೇತರ ಪಕ್ಷಗಳು ಒಗ್ಗೂಡುವ ಐತಿಹಾಸಿಕ ಅವಶ್ಯಕತೆ ಇದೆ ಎಂದು ಸಿಪಿಐ ಮುಖಂಡ, ಪ್ರಧಾನ ಕಾರ್ಯದರ್ಶಿ ಸುರವರಂ ಸುಧಾಕರ್ ರೆಡ್ಡಿ ಕರೆ ನೀಡಿದ್ದಾರೆ.
ಬಿಹಾರದಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಮಹಾಮೈತ್ರಿ ರಚಿಸಿದ ಮಾದರಿಯಲ್ಲೇ 2019 ರ ವೇಳೆಗೆ ಕೇಂದ್ರದಲ್ಲೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಎಲ್ಲಾ ಪಕ್ಷಗಳು ಮೈತ್ರಿಗೆ ಮುಂದಾಗಬೇಕೆಂದು ಸುಧಾಕರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಈ ಹಿಂದೆಯೂ ಇಂತಹ ಅನೇಕ ಮೈತ್ರಿಗಳು ರಚನೆಯಾಗಿದ್ದವು, ಮಾಜಿ ಪ್ರಧಾನಿ ದೇವೇಗೌಡ, ವಿಪಿ ಸಿಂಗ್ ನೇತೃತ್ವದಲ್ಲಿ ಈ ರೀತಿಯ ಮೈತ್ರಿಗಳು ಯಶಸ್ವಿಯಾಗಿದ್ದವು. ಹಲವು ಪಕ್ಷಗಳ ಒಕ್ಕೂಟ ಸಾರ್ವಕಾಲಿಕವಲ್ಲದಿದ್ದರೂ ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಸಹಕಾರಿಯಾಗಿತ್ತು. ಈಗ ಮತ್ತೊಮ್ಮೆ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಿದ್ದು ಬಿಜೆಪಿಯೇತರ ಪಕ್ಷಗಳು ಒಗ್ಗೂಡಬೇಕಿದೆ ಎಂದು ಸುಧಾಕರ್ ರೆಡ್ಡಿ ಕರೆ ನೀಡಿದ್ದಾರೆ.

SCROLL FOR NEXT