ಸಿಪಿಐ 
ದೇಶ

2019 ಕ್ಕೆ ಬಿಜೆಪಿ ವಿರುದ್ಧ ಮಹಾಮೈತ್ರಿಗೆ ಕರೆ ನೀಡಿದ ಎಡಪಕ್ಷ

2019 ರಲ್ಲಿ ಬಿಜೆಪಿಯನ್ನು ದೂರವಿಡುವುದಕ್ಕೆ ಬಿಜೆಪಿಯೇತರ ಪಕ್ಷಗಳು ಒಗ್ಗೂಡುವ ಐತಿಹಾಸಿಕ ಅವಶ್ಯಕತೆ ಇದೆ ಎಂದು ಸಿಪಿಐ ಮುಖಂಡ, ಪ್ರಧಾನ ಕಾರ್ಯದರ್ಶಿ ಸುರವರಂ ಸುಧಾಕರ್ ರೆಡ್ಡಿ ಕರೆ ನೀಡಿದ್ದಾರೆ.

ಹೈದರಾಬಾದ್: 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ದೂರವಿಡುವುದಕ್ಕೆ ಬಿಜೆಪಿಯೇತರ ಪಕ್ಷಗಳು ಒಗ್ಗೂಡುವ ಐತಿಹಾಸಿಕ ಅವಶ್ಯಕತೆ ಇದೆ ಎಂದು ಸಿಪಿಐ ಮುಖಂಡ, ಪ್ರಧಾನ ಕಾರ್ಯದರ್ಶಿ ಸುರವರಂ ಸುಧಾಕರ್ ರೆಡ್ಡಿ ಕರೆ ನೀಡಿದ್ದಾರೆ.
ಬಿಹಾರದಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಮಹಾಮೈತ್ರಿ ರಚಿಸಿದ ಮಾದರಿಯಲ್ಲೇ 2019 ರ ವೇಳೆಗೆ ಕೇಂದ್ರದಲ್ಲೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಎಲ್ಲಾ ಪಕ್ಷಗಳು ಮೈತ್ರಿಗೆ ಮುಂದಾಗಬೇಕೆಂದು ಸುಧಾಕರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಈ ಹಿಂದೆಯೂ ಇಂತಹ ಅನೇಕ ಮೈತ್ರಿಗಳು ರಚನೆಯಾಗಿದ್ದವು, ಮಾಜಿ ಪ್ರಧಾನಿ ದೇವೇಗೌಡ, ವಿಪಿ ಸಿಂಗ್ ನೇತೃತ್ವದಲ್ಲಿ ಈ ರೀತಿಯ ಮೈತ್ರಿಗಳು ಯಶಸ್ವಿಯಾಗಿದ್ದವು. ಹಲವು ಪಕ್ಷಗಳ ಒಕ್ಕೂಟ ಸಾರ್ವಕಾಲಿಕವಲ್ಲದಿದ್ದರೂ ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಸಹಕಾರಿಯಾಗಿತ್ತು. ಈಗ ಮತ್ತೊಮ್ಮೆ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಿದ್ದು ಬಿಜೆಪಿಯೇತರ ಪಕ್ಷಗಳು ಒಗ್ಗೂಡಬೇಕಿದೆ ಎಂದು ಸುಧಾಕರ್ ರೆಡ್ಡಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT