ಮನೋರಮಾ ದೇವಿ 
ದೇಶ

ತಲೆ ಮರೆಸಿಕೊಂಡಿದ್ದ ಜೆಡಿಯು ಎಂಎಲ್ ಸಿ ಶರಣಾಗತಿ: 14 ದಿನ ನ್ಯಾಯಾಂಗ ಬಂಧನ

ಅಕ್ರಮ ಮದ್ಯದ ಬಾಟಲಿಗಳು ಪೊಲೀಸರಿಗೆ ಸಿಕ್ಕ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಯು ಶಾಸಕಿ ಮನೋರಮಾ ದೇವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗಯಾ: ಕಾರ್ ಓವರ್​ಟೇಕ್ ಪ್ರಕರಣದಲ್ಲಿ 19 ವರ್ಷದ ಯುವಕನ್ನು ಗುಂಡಿಟ್ಟು ಕೊಲೆಗೈದ ಮನೋರಮಾ ದೇವಿ ಪುತ್ರ ರಾಕಿ ಯಾದವ್​ನನ್ನು ಶೋಧಿಸುವ ಸಂದರ್ಭ ಪುರಿ ಬಡಾವಣೆಯಲ್ಲಿರುವ ಮನೆಯಲ್ಲಿ ಅಕ್ರಮ ಮದ್ಯದ ಬಾಟಲಿಗಳು ಪೊಲೀಸರಿಗೆ ಸಿಕ್ಕ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಯು ಶಾಸಕಿ ಮನೋರಮಾ ದೇವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೇ 10ರಂದು ರಾಕಿಯಾದವ್ ತನ್ನ ಎಸ್​ಯುವಿ ಕಾರನ್ನು 19 ವರ್ಷದ ಆದಿತ್ಯ ಸಚ್ದೇವ್ ಓವರ್​ಟೇಕ್ ಮಾಡಿದ ಎಂಬ ಕಾರಣಕ್ಕಾಗಿ ಗುಂಡಿಟ್ಟು ಕೊಲೆಗೈದಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಮನೋರಮ ದೇವಿ ಅವರ ಮನೆಯಯನ್ನು ಪೊಲೀಸರು ಪರಿಶೀಲಿಸುವ ವೇಳೆ ಕಾನೂನು ಬಾಹಿರವಾಗಿ ಮನೆಯಲ್ಲಿ ತಯಾರಿಸಿದ ಮದ್ಯ ಸಿಕ್ಕಿತ್ತು.
ಈ  ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಜೆಡಿಯು ಉಚ್ಚಾಟಿತ ಶಾಸಕಿ ಮನೋರಮಾ ದೇವಿ ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಮಾತನಾಡಿದ ಮನೋರಮಾ ದೇವಿ, ‘ಪ್ರಕರಣದ ಕುರಿತು ನನಗೆ ಭಯವಿಲ್ಲ. ನನ್ನ ಮನೆಯಲ್ಲಿ ಯಾವುದೇ ರೀತಿಯ ಮದ್ಯ ತಯಾರಿಸಲಾಗಿಲ್ಲ. ಇದು ರಾಜಕೀಯ ಷಡ್ಯಂತ್ರ’ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?

ಐಫೋನ್‌ಗಳ ಅಬ್ಬರ: ಭಾರತದ ಸ್ಮಾರ್ಟ್‌ಫೋನ್ ರಫ್ತು 10 ಬಿಲಿಯನ್ ಗೇರಿಕೆ, 'ಮೇಕ್ ಇನ್ ಇಂಡಿಯಾ'ಗೆ ಜಾಗತಿಕ ಮನ್ನಣೆ

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ ಉಡುಪಿ BJP ಶಾಸಕ ಎಚ್ಚರಿಕೆ..!