ಮನೋರಮಾ ದೇವಿ 
ದೇಶ

ತಲೆ ಮರೆಸಿಕೊಂಡಿದ್ದ ಜೆಡಿಯು ಎಂಎಲ್ ಸಿ ಶರಣಾಗತಿ: 14 ದಿನ ನ್ಯಾಯಾಂಗ ಬಂಧನ

ಅಕ್ರಮ ಮದ್ಯದ ಬಾಟಲಿಗಳು ಪೊಲೀಸರಿಗೆ ಸಿಕ್ಕ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಯು ಶಾಸಕಿ ಮನೋರಮಾ ದೇವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗಯಾ: ಕಾರ್ ಓವರ್​ಟೇಕ್ ಪ್ರಕರಣದಲ್ಲಿ 19 ವರ್ಷದ ಯುವಕನ್ನು ಗುಂಡಿಟ್ಟು ಕೊಲೆಗೈದ ಮನೋರಮಾ ದೇವಿ ಪುತ್ರ ರಾಕಿ ಯಾದವ್​ನನ್ನು ಶೋಧಿಸುವ ಸಂದರ್ಭ ಪುರಿ ಬಡಾವಣೆಯಲ್ಲಿರುವ ಮನೆಯಲ್ಲಿ ಅಕ್ರಮ ಮದ್ಯದ ಬಾಟಲಿಗಳು ಪೊಲೀಸರಿಗೆ ಸಿಕ್ಕ ಆರೋಪದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಯು ಶಾಸಕಿ ಮನೋರಮಾ ದೇವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೇ 10ರಂದು ರಾಕಿಯಾದವ್ ತನ್ನ ಎಸ್​ಯುವಿ ಕಾರನ್ನು 19 ವರ್ಷದ ಆದಿತ್ಯ ಸಚ್ದೇವ್ ಓವರ್​ಟೇಕ್ ಮಾಡಿದ ಎಂಬ ಕಾರಣಕ್ಕಾಗಿ ಗುಂಡಿಟ್ಟು ಕೊಲೆಗೈದಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಮನೋರಮ ದೇವಿ ಅವರ ಮನೆಯಯನ್ನು ಪೊಲೀಸರು ಪರಿಶೀಲಿಸುವ ವೇಳೆ ಕಾನೂನು ಬಾಹಿರವಾಗಿ ಮನೆಯಲ್ಲಿ ತಯಾರಿಸಿದ ಮದ್ಯ ಸಿಕ್ಕಿತ್ತು.
ಈ  ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಜೆಡಿಯು ಉಚ್ಚಾಟಿತ ಶಾಸಕಿ ಮನೋರಮಾ ದೇವಿ ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಮಾತನಾಡಿದ ಮನೋರಮಾ ದೇವಿ, ‘ಪ್ರಕರಣದ ಕುರಿತು ನನಗೆ ಭಯವಿಲ್ಲ. ನನ್ನ ಮನೆಯಲ್ಲಿ ಯಾವುದೇ ರೀತಿಯ ಮದ್ಯ ತಯಾರಿಸಲಾಗಿಲ್ಲ. ಇದು ರಾಜಕೀಯ ಷಡ್ಯಂತ್ರ’ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT