ಎಂ ವೆಂಕಯ್ಯ ನಾಯ್ಡು 
ದೇಶ

ಅಕ್ಬರ್ ರೋಡ್ ಹೆಸರನ್ನು ಬದಲಾಯಿಸುವುದು ನಮ್ಮ ಅಜೆಂಡಾದಲ್ಲಿಲ್ಲ: ವೆಂಕಯ್ಯ ನಾಯ್ಡು

ನವದೆಹಲಿಯ ಅಕ್ಬರ್ ರಸ್ತೆಯ ಹೆಸರನ್ನು ರಜಪೂತ ರಾಜ ಮಹಾರಾಣಾ ಪ್ರತಾಪ್ ಎಂದು ಬದಲಿಸಬೇಕು ಎಂಬ ಮನವಿಯನ್ನು ಕೇಂದ್ರ ಸಂಸದೀಯ ವ್ಯವಹಾರ...

ನವದೆಹಲಿ:  ನವದೆಹಲಿಯ ಅಕ್ಬರ್ ರಸ್ತೆಯ ಹೆಸರನ್ನು ರಜಪೂತ ರಾಜ ಮಹಾರಾಣಾ ಪ್ರತಾಪ್ ಎಂದು ಬದಲಿಸಬೇಕು ಎಂಬ ಮನವಿಯನ್ನು  ಕೇಂದ್ರ ಸಂಸದೀಯ ವ್ಯವಹಾರ ಖಾತೆಗಳ ಸಚಿವ ಎಂ ವೆಂಕಯ್ಯ ನಾಯ್ಡು ಬುಧವಾರ ತಿರಸ್ಕರಿಸಿದ್ದಾರೆ. 
ರಸ್ತೆಯ ಹೆಸರು ಬದಲಾಯಿಸುವುದರ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಾಯ್ಡು ಅವರು, ಈ ವಿಷಯಗಳು ನನ್ನ ಅಜೆಂಡಾದಲ್ಲಿಲ್ಲ. ನಾನು ಅಭಿವೃದ್ಧಿಯ ಬಗ್ಗೆ ಮಾತ್ರ ಕಾರ್ಯೋನ್ಮುಖನಾಗಿದ್ದೇನೆ ಎಂದು ಹೇಳಿದ್ದಾರೆ.
ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ವಿಕೆ ಸಿಂಗ್ ಅವರು ಅಕ್ಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ನಾಯ್ಡು  ಅವರಿಗೆ ಪತ್ರ ಬರೆದಿದ್ದು, ಇದಕ್ಕೆ ನಾಯ್ಡು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್‌ನಿಂದ ವಿರೋಧ: ಅಕ್ಬರ್ ರಸ್ತೆಯ ಹೆಸರು ಬದಲಾಯಿಸುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತ ಪಡಿಸಿದೆ.  ಬಿಜೆಪಿ ಸರ್ಕಾರ ತಮ್ಮ ಅಧಿಕಾರದಲ್ಲಿನ ವೈಫಲ್ಯಗಳ ಬಗ್ಗೆ ಜನರ ಗಮನವನ್ನು ಬೇರೆಡೆ ತಿರುಗಿಸುವುದಕ್ಕಾಗಿಯೇ ಕೇಂದ್ರ ಸರ್ಕಾರ ಅಕ್ಬರ್ ರಸ್ತೆಯನ್ನು ಮಹಾರಾಣಾ ಪ್ರತಾಪ್ ರಸ್ತೆ  ಎಂದು ಮರುನಾಮಕರಣ ಮಾಡಲು ಹೊರಟಿದೆ ಎಂದು ವಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT