ಸೀತಾರಾಂ ಯೆಚುರಿ 
ದೇಶ

ಕೇರಳ ಜನತೆ ಯುಡಿಎಫ್ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಮತ ಹಾಕಿದ್ದಾರೆ: ಯೆಚುರಿ

ಕೇರಳ ಜನತೆ ಯುಡಿಎಫ್ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ಮತ ಹಾಕಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ..

ನವದೆಹಲಿ: ಕೇರಳ ಜನತೆ ಯುಡಿಎಫ್ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ಮತ ಹಾಕಿದ್ದಾರೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ ಅವರು ಗುರುವಾರ ಹೇಳಿದ್ದಾರೆ.
ಕೇರಳದಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯೆಚುರಿ, ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ ಅಧಿಕಾರಕ್ಕೆ ತಂದ ಕೇರಳ ಜನತೆಯನ್ನು ಅಭಿನಂದಿಸಿದರು, ಅಲ್ಲದೆ ತಮ್ಮ ಪಕ್ಷ ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ ಎಂದರು.
'ಎಲ್ ಡಿಎಫ್ ಮೇಲೆ ವಿಶ್ವಾಸವಿಟ್ಟಿದ್ದಕೆ ಕೇರಳ ಜನತೆಗೆ ನಾನು ನಮಸ್ಕರಿಸುತ್ತೇನೆ ಮತ್ತು ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವ ಭರವಸೆ ನೀಡುತ್ತೇನೆ'  ಎಂದರು.
ಕೇರಳದಲ್ಲಿ ಕೋಮುವಾದಿ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಫಲಿತಾಂಶ ಉತ್ತರ ನೀಡಿದೆ ಎಂದು ಸೀತಾರಾಂ ಯೆಚುರಿ ಅವರು ಹೇಳಿದ್ದಾರೆ.
140 ಸದಸ್ಯ ಬಲವನ್ನು ಹೊಂದಿರುವ ಕೇರಳ ವಿಧಾನಸಭೆಯಲ್ಲಿ ಎಲ್ ಡಿಎಫ್ 90 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT