ಭಾರತ ಇತ್ತೀಚೆಗೆ ಯಶಸ್ವಿಯಾಗಿ ಪರೀಕ್ಷೆ ನಡೆಸಿದ ಕ್ಷಿಪಣಿ ನಿರೋಧಕ ವ್ಯವಸ್ಥೆ (ಸಂಗ್ರಹ ಚಿತ್ರ) 
ದೇಶ

ಪಾಕ್ ಕ್ಷಿಪಣಿ ದಾಳಿಗೆ ಉತ್ತರಿಸುವ ಸಾಮರ್ಥ್ಯ ಭಾರತಕ್ಕಿಲ್ಲ: ತಜ್ಞರಿಂದ ಎಚ್ಚರಿಕೆ

ಪಾಕಿಸ್ತಾನದ ಕ್ಷಿಪಣಿ ದಾಳಿಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಭಾರತಕ್ಕೆ ಇಲ್ಲ ಎಂದು ರಷ್ಯಾದ ಪರಮಾಣು ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ...

ಇಸ್ಲಾಮಾಬಾದ್: ಪಾಕಿಸ್ತಾನದ ಕ್ಷಿಪಣಿ ದಾಳಿಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಭಾರತಕ್ಕೆ ಇಲ್ಲ ಎಂದು ರಷ್ಯಾದ ಪರಮಾಣು ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಮಾಸ್ಕೋದ ಅಣ್ವಸ್ತ್ರ ಪ್ರಸರಣ ತಡೆ ಕೇಂದ್ರದ ಹಿರಿಯ ಸಂಶೋಧಕ ಪೀಟರ್ ಟೊಪಿಚಿಕನೊವ್ ಅವರು ಈ ಬಗ್ಗೆ ಮಾತನಾಡಿದ್ದು, ಒಂದು ವೇಳೆ ಪಾಕಿಸ್ತಾನ ಭಾರತದ ಮೇಲೆ ತನ್ನ ಕ್ಷಿಪಣಿ ದಾಳಿ ಮಾಡಿದರೆ ಬಹುಶಃ ಭಾರತ ಆ ದಾಳಿಯನ್ನು ಸಮರ್ಥವಾಗಿ ತಡೆಯಲು ವಿಫಲವಾಗಬಹುದು ಎಂದು ಹೇಳಿದ್ದಾರೆ.

ಕ್ಷಿಪಣಿ ನಿರೋಧಕ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಸ್ರೇಲ್ ಜತೆಗೆ ಭಾರತ ಸಹಭಾಗಿತ್ವ ಹೊಂದಿದ್ದು, ರಷ್ಯಾದ ಎಸ್-400 ರಕ್ಷಣಾ ವ್ಯವಸ್ಥೆಯನ್ನು ಖರೀದಿಸಲು ಭಾರತ ಮುಂದಾಗಿದೆ. ಹೀಗಿದ್ದರೂ, ಪಾಕಿಸ್ತಾನದ ಕ್ಷಿಪಣಿಯನ್ನು ಸಮರ್ಥವಾಗಿ ಎದುರಿಸಲು ಭಾರತ ಇನ್ನಷ್ಟು ದೂರ ಕ್ರಮಿಸಬೇಕಿದೆ ಎಂದು ಟೊಪಿಚಿಕನೊವ್ ಹೇಳಿದ್ದಾರೆ. ಅಂತೆಯೇ ತಮ್ಮ ಮಾತು ಮುಂದುವರೆಸಿರುವ ಟೊಪಿಚಿಕನೊವ್ "ಮುಂದಿನ 10 ವರ್ಷಗಳಲ್ಲಿ ಪರಮಾಣು ಅಸ್ತ್ರಗಳನ್ನು ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ ಭಾರತವು ಅಪಾರ ಹಣ ವ್ಯಯಿಸುತ್ತಿದೆ. ಹೀಗಿದ್ದರೂ ಭಾರತ-ಪಾಕ್  ಎರಡೂ ರಾಷ್ಟ್ರಗಳ ನಡುವೆ ಅಣ್ವಸ್ತ್ರ ಯುದ್ಧ ನಡೆದಲ್ಲಿ, ಪಾಕ್ ದಾಳಿ ಎದುರಿಸಲು ಭಾರತಕ್ಕೆ ಸಾಮರ್ಥ್ಯವಿದೆಯೇ ಎಂಬುದನ್ನು ಊಹಿಸುವುದು ಕಷ್ಟ ಎಂದು ಅವರು ಹೇಳಿದ್ದಾರೆ.

ಪರಮಾಣು ಪೂರೈಕೆದಾರ ರಾಷ್ಟ್ರಗಳ ಪಟ್ಟಿಗೆ ಭಾರತ; ಟೊಪಿಚಿಕನೊವ್ ವಿರೋಧ
ಇದೇ ವೇಳೆ ಪರಮಾಣು ಪೂರೈಕೆದಾರ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವನ್ನು ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಟೊಪಿಚಿಕನೊವ್ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತದ ನಡೆ ಕುರಿತಂತೆ ಉಳಿದ ರಾಷ್ಟ್ರಗಳು ಎಚ್ಚರಿಕೆ ನಿಲುವು ಪ್ರದರ್ಶಿಸಬೇಕು. ದೆಹಲಿಯಿಂದ ಯಾವುದೇ ಬದಲಾವಣೆ ನಾವು ಕಾಣುತ್ತಿಲ್ಲ. ತನ್ನ ನೀತಿಗಳಲ್ಲಾಗಲಿ ವಿಧಾನಗಳಲ್ಲಿ ಭಾರತ ಬದಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪರಮಾಣು ಪೂರೈಕೆದಾರರ ಸಮೂಹಕ್ಕೆ ಸೇರಲು ಭಾರತ ಸಜ್ಜಾಗಿದ್ದು, ವಿಶ್ವದ ಆತಂಕದ ಹೊರತಾಗಿಯೂ ಪರಮಾಣು ಚಟುವಟಿಕೆಗಳಲ್ಲಿ ಭಾರತ ತನ್ನ ಬದ್ಧತೆ ಮುಂದುವರಿಸಿದೆ. ಕಳೆದ ಭಾನುವಾರ ಒಡಿಶಾದ ಕರಾವಳಿ ತೀರದಲ್ಲಿ ನಡೆಸಿದ ಸ್ವದೇಶಿ ನಿರ್ಮಿತ ಸೂಪರ್‌ಸಾನಿಕ್ ಪ್ರತಿಬಂಧಕ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT