ಉಗ್ರ ಅಬ್ದುಲ್ ವಾಹಿದ್ ಸಿದ್ದಿಬಾಪ (ಸಂಗ್ರಹ ಚಿತ್ರ) 
ದೇಶ

ಭಟ್ಕಳ ಮೂಲದ ಮತ್ತೋರ್ವ ಉಗ್ರ ಅಬ್ದುಲ್ ವಾಹಿದ್ ಬಂಧನ

ಕುಖ್ಯಾತ ಭಯೋತ್ಪಾದನಾ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ನ ಪ್ರಮುಖ ಉಗ್ರ ಅಬ್ದುಲ್ ವಾಹಿದ್ ಸಿದ್ದಿಬಾಪನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.

ನವದೆಹಲಿ: ಕುಖ್ಯಾತ ಭಯೋತ್ಪಾದನಾ ಸಂಘಟನೆ ಇಂಡಿಯನ್ ಮುಜಾಹಿದ್ದೀನ್​ನ ಪ್ರಮುಖ ಉಗ್ರ ಅಬ್ದುಲ್ ವಾಹಿದ್ ಸಿದ್ದಿಬಾಪನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ  ಮಧ್ಯಾಹ್ನ ಬಂಧಿಸಿದ್ದಾರೆ.

ದೇಶ ತೊರೆದು ಭಯೋತ್ಪಾದಕ ಚಟುವಟಿಕೆಯಲ್ಲಿ ನಿರತನಾಗಿದ್ದ ಅಬ್ದುಲ್ ವಾಹಿದ್ ಸಿದ್ದಿಬಾಪ ಇಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಎನ್  ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಸಿದ್ದಿಬಾಪ ದೆಹಲಿ ಬರುವ ಕುರಿತು ಖಚಿತ ಮಾಹಿತಿ ಪಡೆದಿದ್ದ ಎನ್ ಐಎ ಅಧಿಕಾರಿಗಳು ಆತ ಮಾರುವೇಷದಲ್ಲಿರುವಾಗಲೇ ಆತನನ್ನು ಬಂಧಿಸಿದ್ದಾರೆ.

ಮೂಲತಃ ಕರ್ನಾಟಕದ ಭಟ್ಕಳ ಮೂಲದವನಾದ ಅಬ್ದುಲ್ ವಾಹಿದ್ ವೃತ್ತಿಯಲ್ಲಿ ಸುಗಂಧ ವ್ಯಾಪಾರಿಯಾಗಿದ್ದು, ಕುಖ್ಯಾತ ಭಯೋತ್ಪಾದಕ ಯಾಸಿನ್ ಭಟ್ಕಳ್ ನೊಂದಿಗೆ ನಿಕಟ ಸಂಪರ್ಕ  ಹೊಂದಿದ್ದ ಎಂದು ತಿಳಿದುಬಂದಿದೆ. 2008ರಲ್ಲಿ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಆರಂಭವಾದಾಗ ಸಂಘಟನೆ ಸೇರಿದ್ದ ಈತ ಬಳಿಕ ದುಬೈಗೆ ಹಾರಿದ್ದ. ದುಬೈನಲ್ಲಿ ಭೂಗತನಾಗಿ  ಅಲ್ಲಿಂದಲೇ ಭಯೋತ್ಪಾದನಾ ಚಟುವಟಿಕೆಯಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ. ದುಬೈನಲ್ಲಿದ್ದುಕೊಂಡೇ ವಾಹಿದ್ ಸಂಘಟನೆ ಚಟುವಟಿಕೆಗಳಿಗೆ ಯುವಕರನ್ನು ಸೇರ್ಪಡೆ  ಗೊಳಿಸಿಕೊಳ್ಳುವುದು, ಅವರಿಗೆ ವಿಧ್ವಂಸಕ ಚಟುವಟಿಕೆಗೆ ಬೇಕಾದ ಆರ್ಥಿಕ ಸಹಾಯ ಒದಗಿಸುವ ಕಾರ್ಯದಲ್ಲಿ ನಿರತನಾಗಿದ್ದ.

ಅಲ್ಲದೆ ಭಾರತದಲ್ಲಿ ನಡೆದ ಹಲವು ಪ್ರಮುಖ ದಾಳಿ ಮತ್ತು ವಿಧ್ವಂಸಕ ಕೃತ್ಯಗಳಲ್ಲಿಯೂ ಈ ಅಬ್ದುಲ್ ವಾಹಿದ್ ಸಿದ್ದಿಬಾಪನ ಕೈವಾಡದ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈತನ  ಬಂಧನಕ್ಕಾಗಿ ಪೊಲೀಸರು ತೀವ್ರ ಹುಡುತಾಟದಲ್ಲಿದ್ದರು. ಅಲ್ಲದೆ ಈ ಹಿಂದೆ ಇಂಟರ್ ಪೋಲ್ ಪೊಲೀಸರು ರೆಡ್ ಕಾರ್ನರ್ ನೋಟಿಸ್ ಕೂಡ ಹೊರಡಿಸಿದ್ದರು. ವಿವಿಧ ದೇಶಗಳ ಪೊಲೀಸರು  ಈತನ ಮೇಲೆ ಕಣ್ಣಿಟ್ಟಿದ್ದರಿಂದ ಈತನ ಬಂಧನ ಸುಲಭವಾಯಿತು ಎಂದು ಎನ್ ಐಎ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT