ಸೀತಾರಮ್ ಯೆಚೂರಿ 
ದೇಶ

ಎರಡು ವರ್ಷಗಳ ಮೋದಿ ಆಳ್ವಿಕೆಯಲ್ಲಿ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ: ಸೀತಾರಮ್ ಯೆಚೂರಿ

ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ನವದೆಹಲಿ: ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.
ದೇಶದಲ್ಲಿ ಕೇವಲ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆಯಾಗುತ್ತಿರುವುದು ಮಾತ್ರವಲ್ಲದೇ, ಜನರ ಮೇಲೆ ಆರ್ಥಿಕ ಹೊರೆಯನ್ನು ಹೊರಿಸಲಾಗಿದೆ ಎಂದು ಸಿಪಿಐಎಂ ನ ಪೀಪಲ್ಸ್ ಡೆಮಾಕ್ರೆಸಿ ಎಂಬ ಪತ್ರಿಕೆಯಲ್ಲಿ ಬರೆದಿರುವ ಲೇಖನದಲ್ಲಿ  ಸೀತಾರಾಮ್ ಯೆಚೂರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  
ಮೂರನೇ ವರ್ಷದ ಆಡಳಿತಕ್ಕೆ ನರೇಂದ್ರ ಮೋದಿ ಸರ್ಕಾರ ಕಾಲಿಡುತ್ತಿದ್ದು, ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟು ಮಾಡುವ ಪ್ರಯತ್ನಕ್ಕೆ ಪ್ರತಿರೋಧ ತೋರಬೇಕಿದೆ ಎಂದು ಸೀತಾರಾಮ್ ಯೆಚೂರಿ ಕರೆ ನೀಡಿದ್ದಾರೆ. "2014 ರಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಕೋಮು ದೃವೀಕರಣ ನಡೆಯುತ್ತಿದೆ ಎಂದು ಯೆಚೂರಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ