ಮೊಹಮ್ಮದ್ ತಸ್ಲಿಮುದ್ದೀನ್ 
ದೇಶ

ಸಿಎಂ ಹುದ್ದೆಗೆ ನಿತೀಶ್ ನಾಲಾಯಕ್, ಮಹಾ ಮೈತ್ರಿಯಿಂದ ಪಕ್ಷ ಹೊರಬರಬೇಕು: ಆರ್ ಜೆಡಿ ಸಂಸದ

ಬಿಹಾರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ ಜೆ ಡಿ ಜೆಡಿಯು ನೊಂದಿಗಿನ ಮಹಾ ಮೈತ್ರಿಯಿಂದ ಹೊರಬರಬೇಕೆಂದು ಆರ್ ಜೆಡಿ ಪಕ್ಷದ ಸಂಸದ ಮೊಹಮ್ಮದ್ ತಸ್ಲಿಮುದ್ದೀನ್ ಹೇಳಿದ್ದಾರೆ.

ಪಾಟ್ನ: ಬಿಹಾರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ ಜೆ ಡಿ, ಜೆಡಿಯು ನೊಂದಿಗಿನ ಮಹಾ ಮೈತ್ರಿಯಿಂದ ಹೊರಬರಬೇಕೆಂದು ಆರ್ ಜೆಡಿ ಪಕ್ಷದ ಸಂಸದ ಮೊಹಮ್ಮದ್ ತಸ್ಲಿಮುದ್ದೀನ್ ಹೇಳಿದ್ದಾರೆ.
ಜೆಡಿಯು ಮಹಾಮೈತ್ರಿ ಗೆ ಯಾವುದೇ ಸಮರ್ಥನೆ ಇಲ್ಲ. ಆರ್ ಜೆಡಿ ಮಹಾಮೈತ್ರಿಕೂಟದಿಂದ ಹೊರಬರಬೇಕೆಂಬುದು ತಮ್ಮ ವೈಯಕ್ತಿಕ ಅಭಿಪ್ರಾಯವಾಗಿದೆ. ಈ ಬಗ್ಗೆ ಪಕ್ಷದ ವರಿಷ್ಠ ಲಾಲು ಪ್ರಸಾದ್ ಯಾದವ್ ಅಂತಿಮ ನಿರ್ಧಾರ ಕೈಗೊಳ್ಳಬೇಕೆಂದು ತಸ್ಲಿಮುದ್ದೀನ್ ಒತ್ತಾಯಿಸಿದ್ದಾರೆ.  
ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಜಂಗಲ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದ್ದು ಅಪರಾಧ ಪ್ರಕರಣಗಳು ಹಿಂದೆಂದಿಗಿಂತಲೂ ಹೆಚ್ಚಾಗುತ್ತಿವೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗುವುದಿರಲಿ, ಗ್ರಾಮಪಂಚಾಯಿತಿಯ ಮುಖ್ಯಸ್ಥರಾಗುವುದಕ್ಕೂ ಸೂಕ್ತ ವ್ಯಕ್ತಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಿತೀಶ್ ಕುಮಾರ್ ಅವರ ಕರ್ತವ್ಯ. ಒಂದು ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭಿಸುವುದಾಗಿ ತಸ್ಲಿಮುದ್ದೀನ್ ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ನೇಪಾಳ ಪ್ರವಾಹ: ಲೈಕ್ಸ್ ಗಾಗಿ ನಕಲಿ ವಿಡಿಯೋ, ಸುಳ್ಳು ಮಾಹಿತಿ ಪ್ರಸಾರ; 72 ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ!