ಸಾಂದರ್ಭಿಕ ಚಿತ್ರ 
ದೇಶ

ಜಿಶಾಳ ಹತ್ಯೆಯಾಗಿ 25 ದಿವಸ; ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ವಿಫಲ

ದೆಹಲಿಯ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನೆನಪಿಸುವ ಕೇರಳದ ಜಿಶಾ ಕೊಲೆ...

ಕೊಚ್ಚಿ: ದೆಹಲಿಯ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನೆನಪಿಸುವ ಕೇರಳದ ಜಿಶಾ ಕೊಲೆ ಪ್ರಕರಣ ನಡೆದು 25 ದಿನಗಳೇ ಕಳೆದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ.

ಕೊಲೆ ಪ್ರಕರಣದಲ್ಲಿ ವಲಸೆ ಕೆಲಸಗಾರರು ಭಾಗಿಯಾಗಿರಬಹುದು ಎಂಬ ಶಂಕೆಯಿಂದ ದಾರ್ಜಿಲಿಂಗ್ ಗೆ ಭೇಟಿ ಮಾಡಿದ್ದ ಪೊಲೀಸರ ತಂಡ ಯಾವುದೇ ಸುಳಿವು ಸಿಕ್ಕದೆ ವಾಪಾಸಾಗಿದೆ. ಕೊಲೆ ನಡೆಸಲು ಯಾವುದಾದರೂ ಅಂಶಗಳು ಪ್ರೇರಣೆಯಾಗಿರಬಹುದೇ ಎಂಬುದನ್ನು ಪತ್ತೆಹಚ್ಚಲು ಕೂಡ ತನಿಖಾಧಿಕಾರಿಗಳು ವಿಫಲರಾಗಿದ್ದಾರೆ.

ಜಿಶಾ ಕೊಲೆಗೆ ಬಳಸಲಾಗಿದ್ದ ಆಯುಧಗಳನ್ನು ವಶಪಡಿಸಿಕೊಳ್ಳುವಲ್ಲಿ ಕೂಡ ಪೊಲೀಸರು ವಿಫಲರಾಗಿದ್ದಾರೆ. ಜಿಶಾ ಹೋಗುತ್ತಿದ್ದ ಎರ್ನಾಕುಲಂ ಸರ್ಕಾರಿ ಕಾನೂನು ವಿದ್ಯಾಲಯದ ಆಕೆಯ  ಸ್ನೇಹಿತರನ್ನು ತನಿಖೆ ನಡೆಸಲು ತನಿಖಾಧಿಕಾರಿಗಳು ಯೋಚಿಸುತ್ತಿದ್ದಾರೆ.

ಆಕೆಯ ಭುಜದ ಮೇಲಿದ್ದ ಎರಡು ಕಚ್ಚಿದ ಗಾಯಗಳ ಸಹಾಯದಿಂದ ವಿಧಿವಿಜ್ಞಾನ ಪ್ರಯೋಗಾಲಯದ ನೆರವಿನಿಂದ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಲಾಗಿದ್ದು, ಅದರಿಂದಲೂ ಯಾವುದೇ ಸಕಾರಾತ್ಮಕ ಫಲಿತಾಂಶ ಸಿಕ್ಕಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT