ಕುಡಿದ ಮತ್ತಿನಲ್ಲಿ ಸಿಂಹಗಳ ಪಾರ್ಕ್ ನೊಳಗೆ ಜಿಗಿದ ವ್ಯಕ್ತಿ (ಎಎನ್ ಐ ಚಿತ್ರ) 
ದೇಶ

ಕುಡಿದ ಮತ್ತಿನಲ್ಲಿ ಸಿಂಹಗಳ ಪಾರ್ಕ್ ಗೆ ಜಿಗಿದ ಭೂಪ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಪ್ರಾಣ ರಕ್ಷಣೆ

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಅಪಾಯಕಾರಿ ಸಿಂಹಗಳಿರುವ ಪಾರ್ಕ್ ಗೆ ಜಿಗಿದಿದ್ದು, ಕೂಡಲೇ ಸಮಯ ಪ್ರಜ್ಞೆ ಮೆರೆದ ಮೃಗಾಲಯದ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ...

ಹೈದರಾಬಾದ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಅಪಾಯಕಾರಿ ಸಿಂಹಗಳಿರುವ ಪಾರ್ಕ್ ಗೆ ಜಿಗಿದಿದ್ದು, ಕೂಡಲೇ ಸಮಯ ಪ್ರಜ್ಞೆ ಮೆರೆದ ಮೃಗಾಲಯದ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.

ಹೈದರಾಬಾದ್ ನ ನೆಹರೂ ಮೃಗಾಲಯದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ರಾಜಸ್ತಾನ ಮೂಲದ ಸುಮಾರು 35 ವರ್ಷ ವಯಸ್ಸಿನ ಮುಖೇಶ್ ಎಂಬಾತನೇ ಸಿಂಹಗಳ ಪಾರ್ಕ್ ಜಿಗಿದ  ವ್ಯಕ್ತಿಯಾಗಿದ್ದಾನೆ. ಎಚ್ಚರಿಕೆ ಫಲಕವಿದ್ದರೂ ಅದನ್ನು ನಿರ್ಲಕ್ಷಿಸಿದ ಠಾಕೂರ್ ಪಾರ್ಕ್ ನ ಗೋಡೆ ಹತ್ತಿ ಒಳಗೆ ಜಿಗಿದಿದ್ದಾನೆ. ಅದೃಷ್ಟವಶಾತ್ ಅಲ್ಲಿಯೇ ಕೆಲಸ ಮಾಡುತ್ತಿದ್ದ ಮೃಗಾಲಯದ ಸಿಬ್ಬಂದಿ  ಆರ್ ಪಾಪಯ್ಯ ಎಂಬುವವರು ಇದನ್ನು ಕಂಡ ತನ್ನ ಇತರೆ ಸಹೋದ್ಯೋಗಿಗಳನ್ನು ಎಚ್ಚರಿಸಿದ್ದಾರೆ.

ಕುಡುಕ ಮುಖೇಶ್ ಪಾರ್ಕ್ ನೊಳಗೆ ಜಿಗಿಯುತ್ತಿದ್ದಂತೆಯೇ ಎಚ್ಚೆತ್ತ ಸಿಂಹಗಳು ಆತನ ಮೇಲೆ ದಾಳಿ ಮಾಡಲು ಮುಂದಾದವಾದರೂ, ಒಂದು ಕ್ಷಣವೂ ತಡ ಮಾಡದ ಸಿಬ್ಬಂದಿ ಆರ್ ಪಾಪಯ್ಯ  ಕಲ್ಲುಗಳನ್ನು ಎಸೆಯುವ ಮೂಲಕ ಸಿಂಹಗಳನ್ನು ಬೆದರಿಸಿ ದೂರ ಓಡುವಂತೆ ಮಾಡಿದ್ದಾರೆ. ಬಳಿಕ ನೀರಿನ ಹೊಂಡದಲ್ಲಿ ಬಿದ್ದಿದ್ದ ಕುಡುಕ ಮುಖೇಶ್ ನನ್ನು ಕೋಲಿನ ಸಹಾಯದ ಮೂಲಕ  ಮೇಲೆತ್ತಿ ಆತನ ಪ್ರಾಣ ಉಳಿಸಿದ್ದಾರೆ.

ಕೂಡಲೇ ಆತನನ್ನು ವಶಕ್ಕೆ ಪಡೆದ ಮೃಗಾಲಯದ ಸಿಬ್ಬಂದಿ ಪೊಲೀಸರ ವಶಕ್ಕೆ ನೀಡಿದ್ದು, ವೈದ್ಯಕೀಯ ಪರೀಕ್ಷೆಯಿಂದ ಆತ ಕುಡಿದಿರುವುದು ಸಾಬೀತಾಗಿದೆ. ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ  ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ಇಂತಹುದೇ ಒಂದು ಘಟನೆ ಚಿಲಿಯಲ್ಲಿ ನಡೆದಿತ್ತು. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಸ್ಯಾಂಟಿಯಾಗೋ ಮೃಗಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವ ಅಚಾನಕ್ಕಾಗಿ  ಬೆತ್ತಲಾಗಿ ಸಿಂಹಗಳ ಬೋನಿಗೆ ಬಿದ್ದಿದ್ದ. ಕೂಡಲೇ ಆತನ ಸಿಂಹಗಳು ದಾಳಿ ಮಾಡಿದವು. ಆಗ ಆತನ ರಕ್ಷಣೆಗೆ ಯತ್ನಿಸಿದ ಸಿಬ್ಬಂದಿ ಗುಂಡು ಹಾರಿಸಿ 2 ಸಿಂಹಗಳನ್ನು ಕೊಂದು ಹಾಕಿದ್ದರು. ಈ  ಘಟನೆ ಮಾಸುವ ಮುನ್ನವೇ ಅಂತಹುದೇ ಮತ್ತೊಂದು ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಈ ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!