ಸ್ಟಾಲಿನ್ ಗೆ ಆಸನ ವ್ಯವಸ್ತೆ ಬಗ್ಗೆ ಕರುಣಾನಿಧಿ ಕೋಪ 
ದೇಶ

ಜಯಾ ಪ್ರಮಾಣ: ಸ್ಟಾಲಿನ್ ಗೆ ಆಸನ ವ್ಯವಸ್ಥೆ ಬಗ್ಗೆ ಕರುಣಾನಿಧಿ ಕೋಪ

ಎರಡನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಅಧಿಕಾರ ವಹಿಸಿಕೊಂಡಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿನ ಆಸನ ವ್ಯವಸ್ಥೆ ಬಗ್ಗೆ ಡಿಎಂಕೆ ತಗಾದೆ ತೆಗೆದಿದೆ.

ಚೆನ್ನೈ: ಎರಡನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಎಐಎಡಿಎಂಕೆ ನಾಯಕಿ ಜಯಲಲಿತಾ ಅಧಿಕಾರ ವಹಿಸಿಕೊಂಡಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿನ ಆಸನ ವ್ಯವಸ್ಥೆ ಬಗ್ಗೆ ಡಿಎಂಕೆ ತಗಾದೆ ತೆಗೆದಿದೆ.
ಡಿಎಂಕೆ ನಾಯಕ, ಎಂ.ಕೆ.ಸ್ಟ್ಯಾಲಿನ್ ಗೆ ಶಾಸಕರು, ಮಾಜಿ ಸಚಿವರೊಂದಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು ಎಂದು ಡಿಎಂಕೆ ನಾಯಕ ಎಂ ಕರುಣಾನಿಧಿ ಆರೋಪ ಮಾಡಿದ್ದಾರೆ. ಚುನಾವಣೆ ಸೋತ ಎಐಎಡಿಎಂಕೆಯ ಮಿತ್ರ ಪಕ್ಷದ ನಾಯಕ ಆರ್ ಶರತ್ ಕುಮಾರ್ ಅವರಿಗೆ ಮುಂಭಾಗದ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗಿತ್ತು. ವಿರೋಧಪಕ್ಷದ ನಾಯಕರಾಗಿರುವ ಸ್ಟ್ಯಾಲಿನ್ ಗೆ ಮುಂಭಾಗದ ಸಾಲಿನಲ್ಲಿ ಕುಳಿತುಕೊಳ್ಳುವ ಅರ್ಹತೆ ಇತ್ತಾದರೂ ಅವರಿಗೆ  ಹಿಂಭಾಗದ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗಿತ್ತು ಎಂದು ಕರುಣಾನಿಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವ್ಯವಸ್ಥಿತ ರೀತಿಯಲ್ಲಿ ಡಿಎಂಕೆ ಅವಮಾನ ಮಾಡಲಾಗಿದೆ ಎಂದು ಡಿಎಂಕೆ ಜಲಲಿತಾ ಅವರ ಕ್ರಮವನ್ನು ಟೀಕಿಸಿದೆ. ಡಿಎಂಕೆ ಮುಖಂಡ ಸ್ಟ್ಯಾಲಿನ್ ಗೆ 16 ನೇ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು. ಸ್ಟ್ಯಾಲಿನ್ ಅವರೊಂದಿಗೆ ಡಿಎಂಕೆ ಮಾಜಿ ಸಚಿವರಾದ ಎವಿ ವೇಲು, ಶಾಸಕರಾದ ಶೇಖರ್ ಬಾಬು, ಸೆಲ್ವಂ ಸರಿದಂತೆ ಡಿಎಂಕೆ ಮಾಜಿ ಸಚಿವ, ಶಾಸಕರಿಗೂ ಆಸನ ವ್ಯವಸ್ಥೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT