ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 
ದೇಶ

ರೈತರ ಸಾಲ ಮನ್ನ, 500 ಮದ್ಯದ ಅಂಗಡಿಗಳನ್ನು ಮುಚ್ಚುವುದಕ್ಕೆ ಜಯಲಲಿತಾ ಆದೇಶ

ಎರಡನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಚುನಾವಣಾ ಪ್ರಣಾಳಿಕೆಯ ಅಂಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಯಲಲಿತಾ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ಚೆನ್ನೈ: ಎರಡನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಚುನಾವಣಾ ಪ್ರಣಾಳಿಕೆಯ ಅಂಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಯಲಲಿತಾ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.
ರೈತರ ಸಾಲ ಮನ್ನ, ಸರ್ಕಾರಿ ಸ್ವಾಮ್ಯದ ತಮಿಳುನಾಡು ಮಾರ್ಕೆಟಿಂಗ್ ಕಾರ್ಪೊರೇಷನ್ ನ ಕಾರ್ಯನಿರ್ವಣೆ ಅವಧಿಯನ್ನು ಕಡಿಮೆಗೊಳಿಸುವುದು ಹಾಗೂ 500 ಮದ್ಯದ ಅಂಗಡಿಗಳನ್ನು ಕೂಡಲೇ ಮುಚ್ಚಿಸುವುದು ಜಯಲಲಿತಾ ನೀಡಿರುವ ಪ್ರಮುಖ ಆದೇಶಗಳಾಗಿವೆ.
ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಸೇಂಟ್ ಜಾರ್ಜ್ ಫೋರ್ಟ್ ನಲ್ಲಿರುವ ಆಡಳಿತ ಕಛೇರಿಗೆ ಭೇಟಿ ನೀಡಿದ ತಮಿಳುನಾಡು ಸಿಎಂ ಜಯಲಲಿತಾ, ಚುನಾವಣಾ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಈಡೇರಿಸುವ 5 ಕಡತಗಳಿಗೆ ಸಹಿ ಹಾಕಿದ್ದಾರೆ. ಈ ಪೈಕಿ ರೈತರ ಸಾಲ ಮನ್ನ ಮಾಡುವ ಕಡತ, ಮಹಿಳಾ ಫಲಾನುಭವಿಗಳಿಗೆ (ಮಂಗಳಾ ಸೂತ್ರಕ್ಕಾಗಿ) ಚಿನ್ನ ಹಂಚಿಕೆ, 500 ಮದ್ಯದ ಅಂಗಡಿಗಳನ್ನು ಕೂಡಲೇ ಮುಚ್ಚಿಸಲು ಆದೇಶ ನೀಡಿರುವ ಕಡತಗಳು ಪ್ರಮುಖವಾಗಿವೆ. 
ರೈತರ ಸಾಲ ಮನ್ನಾ ಮಾಡಿರುವುದರಿಂದ ಜಯಲಲಿತಾ ಸರ್ಕಾರಕ್ಕೆ 5 ,780 ಕೋಟಿ ರೂ ಹೆಚ್ಚುವರಿ ಹೊರೆ ಬೀಳಲಿದೆ. ಇನ್ನು ಗೃಹ ಬಳಕೆಗಾಗಿ 100 ಯುನಿಟ್ ಗಳಷ್ಟು ವಿದ್ಯುತ್ ನ್ನೂ ಸಹ ಜಯಲಲಿತಾ ಉಚಿತವಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT