ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಸಚಿವ ಜೆ.ಪಿ.ನಡ್ಡಾ 
ದೇಶ

ನೀಟ್: ರಾಷ್ಟ್ರಪತಿ ಭೇಟಿ ಮಾಡಿ ಸುಗ್ರೀವಾಜ್ಞೆ ಬಗ್ಗೆ ವಿವರಿಸಿದ ಸಚಿವ ನಡ್ಡಾ

ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಸೋಮವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿ, ಸಮಾನ ವೈದ್ಯಕೀಯ...

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಸೋಮವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿ, ಸಮಾನ ವೈದ್ಯಕೀಯ ಪ್ರವೇಶ ಪರೀಕ್ಷೆ(ನೀಟ್)ನ್ನು ಒಂದು ವರ್ಷದ ಮಟ್ಟಿಗೆ ಮುಂದೂಡುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ದಾರಿಯನ್ನು ಹಿಡಿಯಬೇಕಾದ ಅನಿವಾರ್ಯತೆ ಏಕೆ ಒದಗಿಬಂತು ಎಂಬ ಬಗ್ಗೆ ವಿವರಣೆ ನೀಡಿದ್ದಾರೆ. ರಾಷ್ಟ್ರಪತಿಯವರು ಸಚಿವರ ವಿವರಣೆಗೆ ತೃಪ್ತರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರ ಸರ್ಕಾರದ ವಿಧೇಯಕಕ್ಕೆ ಸಹಿ ಹಾಕುವ ಮುನ್ನ ರಾಷ್ಟ್ರಪತಿಯವರು ಕೆಲವೊಂದಕ್ಕೆ ಸ್ಪಷ್ಟನೆ ಬಯಸಿದ್ದರು.ರಾಜ್ಯ ಸರ್ಕಾರಗಳನ್ನು ಈ ವರ್ಷ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡುವುದಕ್ಕೆ ಕಾನೂನು ಸಲಹೆ ಪಡೆಯಲು ರಾಷ್ಟ್ರಪತಿ ಬಯಸಿದ್ದಾರೆ.

ಕೇಂದ್ರ ಸರ್ಕಾರದ ವಿಧೇಯಕ ಜಾರಿಗೆ ಬಂದರೆ ರಾಜ್ಯ ಸರ್ಕಾರದ ವಿದ್ಯಾರ್ಥಿಗಳು ಜುಲೈ 24ರಂದು ನಡೆಯುವ ನೀಟ್ ಪರೀಕ್ಷೆ ಬರೆಯಬೇಕಾಗಿಲ್ಲ. ಆದರೆ ಮುಂದಿನ ಶೈಕ್ಷಣಿಕ ವರ್ಷದಿಂದ ದೇಶಾದ್ಯಂತ ಏಕರೂಪ ನೀಟ್ ಪರೀಕ್ಷೆ ಜಾರಿಗೆ ಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT