ಪುನರ್ವಸತಿಗಾಗಿ ಕಾಶ್ಮೀರ ಪಂಡಿತರ ಹೋರಾಟ (ಸಂಗ್ರಹ ಚಿತ್ರ) 
ದೇಶ

'ಕಾಶ್ಮೀರ ದೇವಾಲಯ ಮಸೂದೆ ಅಂಗೀಕಾರ, ಪಂಡಿತರ ವಾಪಸ್ಸಾಗುವುದಕ್ಕೆ ಪೂರಕ'

ವಿಧಾನಸಭೆಯಲ್ಲಿ ಕಾಶ್ಮೀರ ದೇವಾಲಯ ಹಾಗೂ ಪುಣ್ಯಕ್ಷೇತ್ರಗಳ ಮಸೂದೆ ಅಂಗೀಕಾರ ಪಂಡಿತರು ಕಣಿವೆಗೆ ಮರಳಲು ಪೂರ್ವಭಾವಿ ಸಿದ್ಧತೆ ಇದ್ದಂತೆ ಎಂದು ಸಂಘಟನೆಯೊಂದು ಅಭಿಪ್ರಾಯಪಟ್ಟಿದೆ.

ಜಮ್ಮು: ವಿಧಾನಸಭೆಯಲ್ಲಿ ಕಾಶ್ಮೀರ ದೇವಾಲಯ ಹಾಗೂ ಪುಣ್ಯಕ್ಷೇತ್ರಗಳ ಮಸೂದೆ ಅಂಗೀಕಾರ ಪಂಡಿತರ ಪುನರ್ವಸತಿ ವಿಷಯದಲ್ಲಿ ಮಹತ್ವದ ಪರಿಣಾಮ ಬೀರಲಿದ್ದು, ಪಂಡಿತರು ಕಣಿವೆಗೆ ಮರಳಲು ಪೂರ್ವಭಾವಿ ಸಿದ್ಧತೆ ಇದ್ದಂತೆ ಎಂದು ಕಾಶ್ಮೀರಿ ಪಂಡಿತರ ಪರವಾಗಿ ಹೋರಾಟ ನಡೆಸುತ್ತಿರುವ ಸಂಘಟನೆ ಅಭಿಪ್ರಾಯಪಟ್ಟಿದೆ.
ಪಂಡಿತರ ಪುನರ್ವಸತಿ ಪರವಾಗಿ ಹೋರಾಟ ನಡೆಸುತ್ತಿರುವ ಪ್ರೇಮನಾಥ್ ಭಟ್ ಮೆಮೋರಿಯಲ್ ಟ್ರಸ್ಟ್(ಪಿಎನ್ ಬಿಎಂಟಿ) ನ ವಕ್ತಾರ ಆರ್ ಎಲ್ ಭಟ್, ಕಾಶ್ಮೀರದಲ್ಲಿರುವ ದೇವಾಲಯಗಳನ್ನು 'ಕೆಲವರ' ನಿಯಂತ್ರಣದಿಂದ ಹೊರತಂದು ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿಸಬೇಕು ಎಂಬುದು ಕಾಶ್ಮೀರ ದೇವಾಲಯ, ಪುಣ್ಯ ಕ್ಷೇತ್ರ ಮಸೂದೆಯ ಆಶಯವಾಗಿದೆ ಎಂದು ಹೇಳಿದ್ದಾರೆ.
ಮಸೂದೆ ಅಂಗೀಕಾರಕ್ಕೆ ಪಿಎನ್ ಬಿಎಂಟಿ ಸಂಘಟನೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದು, ಈಗ ಮಸೂದೆ ಅಂಗೀಕಾರ, ಪಂಡಿತರ ವಾಪಸ್ಸಾಗುವುದಕ್ಕೆ ಪೂರ್ವಭಾವಿ ಷರತ್ತು ವ್ಹಿಸಿದಂತಾಗಿದ್ದು, ಪಂಡಿತರ ಪುನರ್ವಸತಿ ವಿಷಯಕ್ಕೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮಸೂದೆ ಅಂಗೀಕಾರದಿಂದ ಕಾಶ್ಮೀರ ಕಣಿವೆಯಲ್ಲಿ ಚುನಾಯಿತ ದೇವಾಲಯ ಸಮಿತಿಯೊಂದು ಅಸ್ತಿತ್ವಕ್ಕೆ ಬರಲು ಸಾಧ್ಯವಾಗುತ್ತದೆ. ಮಸೂದೆಯಲ್ಲಿನ ಅಂಶಗಳು ಮಾತಾ ವೈಷ್ಣೋದೇವಿ ಪುಣ್ಯಕ್ಷೇತ್ರ ಮಂಡಳಿಯ ಆಶಯಗಳಿಗೆ ಪೂರಕವಾಗಿವೆ ಎಂದು ಆರ್ ಎಲ್ ಭಟ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!

Rottweiler ನಾಯಿ ದಾಳಿ: ಬರೊಬ್ಬರಿ 8 ಗಂಟೆ ಶಸ್ತ್ರಚಿಕಿತ್ಸೆ, 80 ಹೊಲಿಗೆ... ಕೊನೆಗೂ ಮಾಲೀಕ ಅರೆಸ್ಟ್! Video

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

Indian Stock Market: 2ನೇ ದಿನವೂ ಮಹಾ ಏರಿಕೆ; ಕೇವಲ 15 ನಿಮಿಷದಲ್ಲಿ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ರೂ ವೃದ್ಧಿ!

SCROLL FOR NEXT