ರಾಜದೇವ್ ರಂಜನ್ 
ದೇಶ

ಬಿಹಾರ ಪತ್ರಕರ್ತ ಕೊಲೆ ಪ್ರಕರಣ: 5 ಬಂಧನ

ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣ ಮಹತ್ತರ ಪ್ರಗತಿಯನ್ನು ಪಡೆದುಕೊಂಡಿದ್ದು, ಬಿಹಾರ ಪೊಲೀಸರು ಬುಧವಾರ ಪ್ರಕರಣಕ್ಕೆ ಸಂಬಂಧಿಸಿ...

ನವದೆಹಲಿ: ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣ ಮಹತ್ತರ ಪ್ರಗತಿಯನ್ನು ಪಡೆದುಕೊಂಡಿದ್ದು, ಬಿಹಾರ ಪೊಲೀಸರು ಬುಧವಾರ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ಬಂಧನಕ್ಕೊಳಗಾಗಿರುವ ಐವರೂ ಆರೋಪಿಗಳು ಶೂಟರ್ ಗಳಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದ ರಾಜದೇವ್ ರಂಜನ್ ಅವರನ್ನು ಮೇ.13ರಂದು ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸಿವಾನ್ ನ ಹತ್ತಿರುವಿರುವ ಹಣ್ಣಿನ ಮಾರುಕಟ್ಟೆ ಬಳಿ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪತ್ರಕರ್ತನ ಕೊಲೆ ಸಾಕಷ್ಟು ನೋವುಂಟು ಮಾಡಿದೆ. ಪ್ರಕರಣ ಕುರಿತು ಆಳವಾದ ತನಿಖೆ ನಡೆಸಿ ಕೊಲೆಗಾರರನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಈ ಭರವಸೆ ನೀಡಿದ್ದರು. ಇದರಂತೆ ಇದೀಗ ಬಿಹಾರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT