ರಾಜದೇವ್ ರಂಜನ್ 
ದೇಶ

ಬಿಹಾರ ಪತ್ರಕರ್ತ ಕೊಲೆ ಪ್ರಕರಣ: 5 ಬಂಧನ

ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣ ಮಹತ್ತರ ಪ್ರಗತಿಯನ್ನು ಪಡೆದುಕೊಂಡಿದ್ದು, ಬಿಹಾರ ಪೊಲೀಸರು ಬುಧವಾರ ಪ್ರಕರಣಕ್ಕೆ ಸಂಬಂಧಿಸಿ...

ನವದೆಹಲಿ: ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣ ಮಹತ್ತರ ಪ್ರಗತಿಯನ್ನು ಪಡೆದುಕೊಂಡಿದ್ದು, ಬಿಹಾರ ಪೊಲೀಸರು ಬುಧವಾರ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ಬಂಧನಕ್ಕೊಳಗಾಗಿರುವ ಐವರೂ ಆರೋಪಿಗಳು ಶೂಟರ್ ಗಳಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

43 ವರ್ಷದ ರಾಜದೇವ್ ರಂಜನ್ ಅವರನ್ನು ಮೇ.13ರಂದು ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸಿವಾನ್ ನ ಹತ್ತಿರುವಿರುವ ಹಣ್ಣಿನ ಮಾರುಕಟ್ಟೆ ಬಳಿ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪತ್ರಕರ್ತನ ಕೊಲೆ ಸಾಕಷ್ಟು ನೋವುಂಟು ಮಾಡಿದೆ. ಪ್ರಕರಣ ಕುರಿತು ಆಳವಾದ ತನಿಖೆ ನಡೆಸಿ ಕೊಲೆಗಾರರನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಈ ಭರವಸೆ ನೀಡಿದ್ದರು. ಇದರಂತೆ ಇದೀಗ ಬಿಹಾರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT