ಸೋನಿಯಾ ಗಾಂಧಿ-ರಾಹುಲ್ ಗಾಂಧಿ 
ದೇಶ

ಸ್ಟ್ಯಾಂಪ್ ಪೇಪರ್ ಗೆ ಸಹಿ ಹಾಕಿ ಪಶ್ಚಿಮ ಬಂಗಾಳ ಶಾಸಕರಿಂದ ಸೋನಿಯಾ ನಿಷ್ಠೆ ಪ್ರದರ್ಶನ!

ಸಾಲು ಸಾಲು ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ, "ಸೋನಿಯಾ, ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಪಶ್ಚಿಮ ಬಂಗಾಳದ ಶಾಸಕರಿಂದ ಸ್ಟ್ಯಾಂಪ್ ಪೇಪರ್ ಮೇಲೆ ಬರೆಸಿಕೊಳ್ಳುತ್ತಿದೆ.

ಕೋಲ್ಕತಾ: ಸಾಲು ಸಾಲು ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ,  "ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಪಶ್ಚಿಮ ಬಂಗಾಳದ ಶಾಸಕರಿಂದ ಸ್ಟ್ಯಾಂಪ್ ಪೇಪರ್ ಮೇಲೆ ಬರೆಸಿಕೊಳ್ಳುತ್ತಿದೆ.
ಅಭದ್ರ ಸ್ಥಿತಿಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ,  ಪಶ್ಚಿಮ ಬಂಗಾಳದಲ್ಲಿ ಇಂಥದ್ದೊಂದು ಅಭಿಯಾನ ಪ್ರಾರಂಭಿಸಿದ್ದು, ರಾಜ್ಯದಲ್ಲಿ ನೂತನವಾಗಿ ಆಯ್ಕೆಗೊಂಡ ಶಾಸಕರಿಂದ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಸ್ಟ್ಯಾಂಪ್ ಪೇಪರ್ ಮೇಲೆ ಬರೆ
ಸುತ್ತಿದೆ. ಆಂಗ್ಲ ಮಾಧ್ಯಮವೊಂದು ಪ್ರಕಟಿಸಿರುವುದರ ವರದಿ ಪ್ರಕಾರ, ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ, ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುತ್ತೆವೆ ಎಂದು 100 ರೂಪಾಯಿ ಸ್ಟ್ಯಾಂಪ್ ಪೇಪರ್ ಮೇಲೆ ಪ್ರಮಾಣ  ಮಾಡುವಂತೆ ಶಾಸಕರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಆದರೆ ಎರಡೂ ಪಕ್ಷಗಳಿಗೆ ಹೀನಾಯ ಸೋಲುಂಟಾಗಿದೆ. ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವುದರೊಂದಿಗೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಎಂದೂ ಕಾಂಗ್ರೆಸ್ ಶಾಸಕರು ಸ್ಟ್ಯಾಂಪ್ ಪೇಪರ್ ಮೇಲೆ ಪ್ರಮಾಣಮಾಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ದಿಢೀರ್ ರಾಜೀನಾಮೆ; ರವಿಗೆ ಹೆಚ್ಚುವರಿ ಜವಾಬ್ದಾರಿ

SCROLL FOR NEXT